6:57 AM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು