5:58 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು