12:23 AM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು