11:11 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು