12:04 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು