12:45 AM Sunday9 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು