2:32 AM Saturday25 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು