1:25 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು