5:50 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು