9:36 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು