10:06 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಮತ್ತೆರೆಡು ಹೊಸ ಧಾರಾವಾಹಿಗಳು: ‘ವಧು’ ಮತ್ತು ‘ಯಜಮಾನ’ ಆರಂಭ

29/01/2025, 16:21

ಮಂಗಳೂರು(reporterkarnataka.com): ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗೆ ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ. ಎರಡೂ ಕತೆಗಳು ಆಧುನಿಕ ಬದುಕಿನ ಸಂಬಂಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳು.

ಇತ್ತೀಚಿನ ಸುದ್ದಿ

ಜಾಹೀರಾತು