2:02 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕ್ಲಬ್ ಹೌಸ್ ನಲ್ಲಿ ಇಂದು ಮೊದಲ ಬಾರಿಗೆ ಪೇಜಾವರ ಶ್ರೀ, ಡಾ. ಕೆ. ಕೆ. ಮುಹಮದ್ ಅವರ ಉಪನ್ಯಾಸ; ಅಯೋಧ್ಯೆಯ ಕುರಿತು ವಿಚಾರ ಮಂಥನ

06/09/2021, 11:06

ಮಂಗಳೂರು(reporterkarnataka.com): ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’ ವಿಷಯದ ಕುರಿತು ವಿಚಾರ ಮಂಥನ ವಿಶೇಷ ಕಾರ್ಯಕ್ರಮ ಸೆಪ್ಟೆಂಬರ್ 6ರಂದು(ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ.

ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ, ಇಡಿಯ ಹೋರಾಟ ರೂಪುಗೊಂಡ ಬಗೆ, ವಿವಾದ ಪರಿಹಾರವಾದ ರೀತಿ, ಪುರಾತತ್ವ ದಾಖಲೆಗಳ ವಿವರಗಳು, ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರಾಭಿಮಾನ ಜಾಗೃತವಾದ ಬಗೆ.. ಇವೆಲ್ಲವನ್ನೂ ಮೆಲುಕು ಹಾಕುವ ಒಂದು ವಿಶೇಷ ಕಾರ್ಯಕ್ರಮ ದಿನಾಂಕ 6 ಸೆಪ್ಟೆಂಬರ್ 2021 (ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ. 

ಕಾರ್ಯಕ್ರಮದ ವಿವರ ಹೀಗಿದೆ:

ಶೀರ್ಷಿಕೆ: ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’

ಉಪಸ್ಥಿತಿ ಮತ್ತು ಮುಖ್ಯ ಉಪನ್ಯಾಸ: 

 ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು

(ಶ್ರೀ ಪೇಜಾವರ ಅಧೋಕ್ಷಜ ಮಠ, ಉಡುಪಿ ಹಾಗೂ ವಿಶ್ವಸ್ಥರು, ಶ್ರೀರಾಮಜನ್ಮಭೂಮಿ ತೀರ್ಥ ಟ್ರಸ್ಟ್, ಅಯೋಧ್ಯಾ)

ಉಪಸ್ಥಿತಿ: ಶ್ರೀ ರಾಜಶೇಖರಾನಂದ ಶ್ರೀಪಾದಂಗಳವರು

(ಗುರುಪುರ ಶ್ರೀ ವಿದ್ಯಾಮಾನ್ಯ ತೀರ್ಥ ಸಂಸ್ಥಾನಮ್, ವಜ್ರದೇಹಿ ಮಠ)

ವಿಶೇಷ ಆಮಂತ್ರಿತರು: ಪದ್ಮಶ್ರೀ ಪುರಸ್ಕೃತ ಡಾ. ಕೆ. ಕೆ. ಮುಹಮದ್

(ನಿವೃತ್ತ ಅಧಿಕಾರಿಗಳು, ಪ್ರಾಚ್ಯ ಮತ್ತು ಪುರಾತತ್ವ ಇಲಾಖೆ, ಭಾರತ ಸರಕಾರ)

ವಿಶೇಷ ಆಮಂತ್ರಿತರು: ಶ್ರೀ ಎನ್. ರವಿಕುಮಾರ್

(ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಸರಕಾರ)

ಕಾರ್ಯಕ್ರಮವನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ  ನಡೆಸಿಕೊಡಲಿದ್ದಾರೆ. ಗಾಯಕಿ

ರಮ್ಯಾ ವಾಸಿಷ್ಠ ಪ್ರಾರ್ಥನೆ ಹಾಡಲಿದ್ದಾರೆ. ಸಮಾಜದ ಹತ್ತುಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು