6:19 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಕ್ಲಬ್ ಹೌಸ್ ನಲ್ಲಿ ಇಂದು ಮೊದಲ ಬಾರಿಗೆ ಪೇಜಾವರ ಶ್ರೀ, ಡಾ. ಕೆ. ಕೆ. ಮುಹಮದ್ ಅವರ ಉಪನ್ಯಾಸ; ಅಯೋಧ್ಯೆಯ ಕುರಿತು ವಿಚಾರ ಮಂಥನ

06/09/2021, 11:06

ಮಂಗಳೂರು(reporterkarnataka.com): ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’ ವಿಷಯದ ಕುರಿತು ವಿಚಾರ ಮಂಥನ ವಿಶೇಷ ಕಾರ್ಯಕ್ರಮ ಸೆಪ್ಟೆಂಬರ್ 6ರಂದು(ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ.

ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ, ಇಡಿಯ ಹೋರಾಟ ರೂಪುಗೊಂಡ ಬಗೆ, ವಿವಾದ ಪರಿಹಾರವಾದ ರೀತಿ, ಪುರಾತತ್ವ ದಾಖಲೆಗಳ ವಿವರಗಳು, ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರಾಭಿಮಾನ ಜಾಗೃತವಾದ ಬಗೆ.. ಇವೆಲ್ಲವನ್ನೂ ಮೆಲುಕು ಹಾಕುವ ಒಂದು ವಿಶೇಷ ಕಾರ್ಯಕ್ರಮ ದಿನಾಂಕ 6 ಸೆಪ್ಟೆಂಬರ್ 2021 (ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ. 

ಕಾರ್ಯಕ್ರಮದ ವಿವರ ಹೀಗಿದೆ:

ಶೀರ್ಷಿಕೆ: ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’

ಉಪಸ್ಥಿತಿ ಮತ್ತು ಮುಖ್ಯ ಉಪನ್ಯಾಸ: 

 ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು

(ಶ್ರೀ ಪೇಜಾವರ ಅಧೋಕ್ಷಜ ಮಠ, ಉಡುಪಿ ಹಾಗೂ ವಿಶ್ವಸ್ಥರು, ಶ್ರೀರಾಮಜನ್ಮಭೂಮಿ ತೀರ್ಥ ಟ್ರಸ್ಟ್, ಅಯೋಧ್ಯಾ)

ಉಪಸ್ಥಿತಿ: ಶ್ರೀ ರಾಜಶೇಖರಾನಂದ ಶ್ರೀಪಾದಂಗಳವರು

(ಗುರುಪುರ ಶ್ರೀ ವಿದ್ಯಾಮಾನ್ಯ ತೀರ್ಥ ಸಂಸ್ಥಾನಮ್, ವಜ್ರದೇಹಿ ಮಠ)

ವಿಶೇಷ ಆಮಂತ್ರಿತರು: ಪದ್ಮಶ್ರೀ ಪುರಸ್ಕೃತ ಡಾ. ಕೆ. ಕೆ. ಮುಹಮದ್

(ನಿವೃತ್ತ ಅಧಿಕಾರಿಗಳು, ಪ್ರಾಚ್ಯ ಮತ್ತು ಪುರಾತತ್ವ ಇಲಾಖೆ, ಭಾರತ ಸರಕಾರ)

ವಿಶೇಷ ಆಮಂತ್ರಿತರು: ಶ್ರೀ ಎನ್. ರವಿಕುಮಾರ್

(ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಸರಕಾರ)

ಕಾರ್ಯಕ್ರಮವನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ  ನಡೆಸಿಕೊಡಲಿದ್ದಾರೆ. ಗಾಯಕಿ

ರಮ್ಯಾ ವಾಸಿಷ್ಠ ಪ್ರಾರ್ಥನೆ ಹಾಡಲಿದ್ದಾರೆ. ಸಮಾಜದ ಹತ್ತುಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು