4:25 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ ಉದ್ಯೋಗ: ಮುಖ್ಯಮಂತ್ರಿ ಘೋಷಣೆ

25/11/2025, 20:07

*ಹೊರ ರಾಜ್ಯದ ಪಟುಗಳಿಗೆ ತಲಾ 2 ಲಕ್ಷ ನಗದು: ಸಿ.ಎಂ ಘೋಷಣೆ*

ಬೆಂಗಳೂರು(reporterkarnataka.com): ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು,
ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.
ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು.
ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿ‌ನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.


ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ.
ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಉಪಸ್ಥಿತರಿದ್ದು, ಆಟಗಾರ್ತಿಯರಿಗೆ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು