8:56 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ

27/05/2021, 14:58

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು.

ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ್ಯಾಳ ಗ್ರಾಮದಲ್ಲಿ ನೀರಾವರಿ ಪಂಪ್ ಸೆಟ್ ಗಳಿಗೆ ಗುರುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರು ಜತೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೇಳಲಾದಾಗ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮದೇನಿದ್ದರೂ ಕೊರೊನಾ ನಿಯಂತ್ರಣಕ್ಕೆ ಮೊದಲ ಆದ್ಯತೆ ಎಂದರು.

ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ನಡೆಸುವುದು ಸಾರ್ವಜನಿಕ ಜೀವನದಲ್ಲಿರುವವರಿಗೆ ಸಲ್ಲದು ಎಂದು ಅವರು ನುಡಿದರು.

ಯಾತ ನೀರಾವರಿಯಿಂದ ಮುಂಗಾರು ಬೆಳೆಗೆ ತುಂಬಾ ಅನುಕೂಲವಾಗಲಿದೆ. ಜೂನ್ ನಲ್ಲಿ ಆರಂಭಿಸುತ್ತಿದ್ದ ನೀರಾವರಿಗೆ ಈ ಬಾರಿ ಮೇ ತಿಂಗಳಿನಲ್ಲಿ ಚಾಲನೆ ನೀಡಲಾಗಿದೆ ಎಂದು ಮಾಧ್ಯಮ ಜತೆ ಹರ್ಷ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು