1:24 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಿಎಂ-ಡಿಸಿಎಂ ಪರಸ್ಪರ ಬಾವಿಗೆ ತಳ್ಳಲು ನೋಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ

30/11/2025, 20:44

* ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗೆ ಡಿಕೆಶಿ, ಸಿದ್ದರಾಮಯ್ಯ ಮುಸುಕಿನ ಗುದ್ದಾಟ

* ಸಿಎಂ ಗಾದಿ ಬಾಡಿದಾಟದಲ್ಲಿ ರಾಜ್ಯದ ಹಿತ, ರೈತರ ಸಂಕಷ್ಟ ಮರೆತ ಸರ್ಕಾರ

ಹುಬ್ಬಳ್ಳಿ(reporterkarnataka.com): “ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ-ಡಿಸಿಎಂ ಇಬ್ಬರೂ ಒಬ್ಬರಿಗೊಬ್ಬರು ಬಾವಿಯಲ್ಲಿ ಕೆಡವಲು ನೋಡುತ್ತಿದ್ದಾರೆ ಅಷ್ಟೇ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಿಎಂ ಗದ್ದುಗೆ ಗುದ್ದಾಟದ ಬಗ್ಗೆ ಹೀಗೆ ಪ್ರತಿಕ್ರಿಯಿಸಿ, ಇಬ್ಬರೂ ಸಿಎಂ ಮತ್ತು ಅಧಿಕಾರ ಹಂಚಿಕೆ ವಿಚಾರದಲ್ಲಿ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎನ್ನುತ್ತಾರೆ. ಹಾಗಾದರೆ ಇಲ್ಲಿವರು ಬ್ರೇಕ್ ಫಾಸ್ಟ್ ನೆಪದಲ್ಲಿ ಅರ್ಧ ಇಡ್ಲಿ ತಿನ್ನಬೇಕಿತ್ತೇ? ಎಂದು ವ್ಯಂಗ್ಯವಾಡಿದರು.
ಸಿಎಂ ಕುರ್ಚಿಗಾಗಿ ಸಿಎಂ – ಡಿಸಿಎಂ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಮೇಲ್ನೋಟಕ್ಕೆ ಎಲ್ಲವನ್ನೂ ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎನ್ನುತ್ತಿದ್ದಾರೆ. ಆದರೆ ಈರ್ವರೂ ಜಟಾಪಟಿ ಮಾತ್ರ ಬಿಟ್ಟಿಲ್ಲ ಎಂದು ಹೇಳಿದರು.
ಇಬ್ಬರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಆದರೆ ಕಾಂಗ್ರೆಸ್ ಅಲ್ಲಿ ಖರ್ಗೆ ಅವರದ್ದು ಏನೂ ನಡೆಯುವುದಿಲ್ಲ. ಎಲ್ಲಾ ನಕಲಿ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರದ್ದೇ ಫೈನಲ್. ಹಾಗಾಗಿ ಖರ್ಗೆ ಹೈಕಮಾಂಡ್ ಮೇಲೆ ಎತ್ತಿ ಹಾಕುತ್ತಿದ್ದಾರೆ ಎಂದು ಜೋಶಿ ಹೇಳಿದರು.
ಸಿಎಂ, ಡಿಸಿಎಂ ಒಗ್ಗಟ್ಟಿನ ಮಂತ್ರ ಜಪಿಸುತ್ತಲೇ ಜೈಲಿಗೂ ಹೋಗಿ ಶಾಸಕರ ಬೆಂಬಲ ಕೋರುತ್ತಿದ್ದಾರೆ. ಅಂದರೆ ಸಿಎಂ ಗದ್ದುಗೆ ಜಟಾಪಟಿ ಕಾಂಗ್ರೆಸ್ ನಲ್ಲಿ ಅದೆಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ ಎಂಬುದನ್ನು ತೋರ್ಪಡಿಸುತ್ತದೆ. ಬ್ರೇಕ್ ಫಾಸ್ಟು, ಒಗ್ಗಟ್ಟು ಎಂಬುದೆಲ್ಲಾ ಒಂದು ನಾಟಕ ಎಂದು ಜೋಶಿ ಲೇವಡಿ ಮಾಡಿದರು.
ಒಗ್ಗಟ್ಟು ಒಗ್ಗಟ್ಟು ಎನ್ನುತ್ತಲೇ ಒಬ್ಬರಿಗೊಬ್ಬರು ಬಾವಿಗೆ ತಳ್ಳಲು ನೋಡುತ್ತಿದ್ದಾರೆ. ಸಿಎಂ ಕುರ್ಚಿ ಗುದ್ದಾಟಕ್ಕೆ ಕದನ ವಿರಾಮ ಬಿದ್ದಿಲ್ಲ. ಮುಸುಕಿನ ಗುದ್ದಾಟ ನಡೆದೇ ಇದೆ. ಈ ಬಡಿದಾಟದಲ್ಲಿ ರಾಜ್ಯದ ಹಿತವನ್ನು, ರೈತರ ಸಂಕಷ್ಟ ಸ್ಥಿತಿಯನ್ನು ಮರೆತು ಬಿಟ್ಟಿದ್ದಾರೆ ಸಿಎಂ ಡಿಸಿಎಂ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

*ಬದಿದಾಟದಲ್ಲಿ ರೈತರ ಮರೆತ ಸರ್ಕಾರ:*
ಸರ್ಕಾರ ಒಳ ಬಡಿದಾಟದಲ್ಲೇ ಹೆಚ್ಚಿದೆ. ಹಾಗಾಗಿ ರೈತರ ಬಗ್ಗೆ, ಯೋಜನೆ ಅನುಷ್ಠಾನ ಬಗ್ಗೆ ಗಮನ ಹರಿಸಿಲ್ಲ ಎಂದು ಆರೋಪಿಸಿದ ಸಚಿವ ಜೋಶಿ, ಸಕ್ಕರೆ ಕಾರ್ಖಾನೆ ಮತ್ತು ಕಬ್ಬು ಬೆಳೆಗಾರರು ಮತ್ತು ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಎಲ್ಲ ತರಹದ ಬೆಂಬಲ ನೀಡಿದೆ. ಅದನ್ನು ಅನುಷ್ಠಾನಕ್ಕೆ ತರಬೇಕಾದ್ದು ರಾಜ್ಯ ಸರ್ಕಾರದ ಕೆಲಸ ಎಂದು ಚಾಟಿ ಬೀಸಿದರು.
ಎಥೆನಾಲ್ ಉತ್ಪಾದನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಉತ್ತಮ ಬೆಲೆಯನ್ನೂ ಕೊಡುತ್ತಿದೆ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಿದೆ. ಮೆಕ್ಕೆಜೋಳಕ್ಕೂ ಬೆಂಬಲ ಬೆಲೆಯಿದೆ. ಹೀಗಿರುವಾಗ ಎಥೆನಾಲ್ ಉತ್ಪಾದನೆಗೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಡಿಸ್ಟಿಲರಿಗಳು ಅಬಕಾರಿ ಅಡಿಯಲ್ಲಿ ಬರುತ್ತವೆಯಾದ್ದರಿಂದ ಮಾನಿಟರ್ ಮಾಡಬೇಕು ಎಂದು ಜೋಶಿ ಹೇಳಿದರು.

*ಮನ್ ಕಿ ಬಾತ್ ಪ್ರೇರಣೆ:* ಪ್ರಧಾನಿ ನರೇಂದ್ರ ಮೋದಿ ಅವರ “ಮನ್ ಕೀ ಬಾತ್” ಯುವ ಸಮುದಾಯಕ್ಕೆ ಪ್ರೇರಣೆಯಾಗಿದೆ. ಪ್ರತಿ ಬಾರಿಯೂ ಪ್ರಧಾನಿ ಮೋದಿ ಅವರು ದೇಶದೆಲ್ಲೆಡೆಯ ಹೊಸ ಹೊಸ ವಿಚಾರ, ಸಂಗತಿ, ಯೋಜನೆಗಳನ್ನು ಪ್ರಸ್ಥಾಪಿಸುತ್ತಿದ್ದಾರೆ. ಇದು ಎಲ್ಲರಿಗೂ ಪ್ರೇರಣದಾಯಕವಾಗಿದೆ ಎಂದರು.
ನವೀಕರಿಸಬಹುದಾದ ಇಂಧನ ಇಲಾಖೆ ಮುಖೇನ ಸ್ಟಾರ್ಟ್ ಅಪ್ ಗಳಿಗೆ ಕೇಂದ್ರ ಸರ್ಕಾರ ₹ 100 ಕೋಟಿ ಒದಗಿಸಿದೆ. ಹೀಗೆ ಪ್ರತಿಯೊಂದಕ್ಕೂ ಪ್ರಧಾನಿ ಮೋದಿ ಮನ್ ಕೀ ಬಾತ್ ಮೂಲಕ ಉತ್ತೇಜನ, ಪ್ರೇರಣೆ ನೀಡುತ್ತಿದ್ದಾರೆ. ಇದು ಹೆಮ್ಮೆಯ ವಿಚಾರ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು