12:00 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಸಿಎಂ, ಡಿಸಿಎಂ ಸರ್ವಾಧಿಕಾರಿಗಳಾ?: ನಿಂದನೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಡಾ.ಭರತ್ ಶೆಟ್ಟಿ ಕಿಡಿ

17/12/2023, 20:11

ಸುರತ್ಕಲ್(reporterkarnataka.com): ರಾಜಕಾರಣಿಗಳ ವಿರುದ್ದ ಜನರ ಟೀಕೆ ಸಾಮಾನ್ಯ.ಅದನ್ನು ಅರಗಿಸಿಕೊಂಡು ರಾಜಕಾರಣ ಮಾಡುವ ಉದಾರ ಮನಸ್ಸು ಬೆಳೆಸಿಕೊಳ್ಳಿ.
ಸಿಎಂ ಸಿದ್ದರಾಮಯ್ಯ ,ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ , ನೀವೇನು ಸರ್ವಾಧಿಕಾರಿಗಳಾ?. ನಿಂದನೆ ಮಾಡಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿ ಕಾರ್ಯಕರ್ತರಲ್ಲಿ ಭೀತಿ ಮೂಡಿಸುವ ನಿಮ್ಮ ಕುತಂತ್ರವನ್ನು ಮೆಟ್ಟಿ ನಿಲ್ಲುತ್ತೇವೆ ಎಂದು ಡಾ.ಭರತ್ ಶೆಟ್ಟಿ ವೈ. ಗುಡುಗಿದ್ದಾರೆ.
ಮೋದಿ, ಯೋಗಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ದಿನ ಬೆಳಗಾದರೆ ನಿಂದನೆಯ ಮಹಾಪೂರ ಹರಿದು ಬರುತ್ತದೆ. ಇದರ ವಿರುದ್ದ ಬಿಜೆಪಿ ಕಾರ್ಯಕರ್ತರು ಕೇಸು ದಾಖಲಿಸುತ್ತಾ ಹೋದರೆ ಠಾಣೆಯಲ್ಲಿ ಇರುವ ಸೆಲ್ ಗಳು ಸಾಕಾಗದು.
ಸಾಮಾನ್ಯರು ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ವಾರಗಟ್ಟಲೆ ಸತಾಯಿಸುವ ಪೊಲೀಸ್ ಇಲಾಖೆ, ಕಾಂಗ್ರೆಸ್ ಪರವಾಗಿ ಕೆಲಸ ಮಾಡಲು ತುದಿಗಾಲಲ್ಲಿ ನಿಂತಿರುವಂತೆ ಕಾಣುತ್ತದೆ.
ಹೆಚ್ಚು ದಿನ ಇಂತಹ ಕಳ್ಳ ಪೊಲೀಸ್ ಆಟ ನಡೆಯಲಾರದು ಎಂದು ಎಚ್ಚರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತನ ಪರ ಪಕ್ಷ ಹಾಗೂ ವೈಯಕ್ತಿಕವಾಗಿ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು