8:09 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಸಿ.ಎಂ.ಇಬ್ರಾಹಿಂ ಕಾಂಗ್ರೆಸ್‌ನಲ್ಲೇ ಮುಂದುವರಿಯುತ್ತಾರೆ ಎಂದ ಯು.ಟಿ.ಖಾದರ್ !

31/01/2022, 18:06

ಮಂಗಳೂರು (ReporterKarnataka.Com) ಸಿ.ಎಂ.ಇಬ್ರಾಹಿಂ ಅವರು ನಮ್ಮ ಹಿರಿಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಮುಂದೆಯೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿ.ಎಂ.ಇಬ್ರಾಹಿಂ ಕೊಡುಗೆ ಅತಿ ಅಗತ್ಯವಾಗಿದೆ. ದೇಶ-ರಾಜ್ಯದ ಜತೆಗೆ ಜನಸಾಮಾನ್ಯರಿಗೆ ವಿರೋಧವಾಗಿರುವ ಬಿಜೆಪಿ ಸರಕಾರವನ್ನು ಕಿತ್ತೊಗೆಯುವುದು ನಮ್ಮ ಪ್ರಮುಖ ಉದ್ದೇಶವಾಗಿದೆ.

ಉಪನಾಯಕನ ಸ್ಥಾನದ ಕುರಿತು ಹಿಂದೆಯೇ ಚರ್ಚೆಯಾಗಿತ್ತು. ಸಿ.ಎಂ.ಇಬ್ರಾಹಿಂ ಅವರ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ತಾನು ಸಣ್ಣ ವಯಸ್ಸಿನಿಂದಲೂ ಕಾಂಗ್ರೆಸ್‌ನಲ್ಲಿ ಬೇರೆ ಬೇರೆ ಸ್ಥಾನಗಳನ್ನು ಅಲಂಕರಿಸಿ ಶಾಸಕನಾಗಿ, ಸಚಿವನಾಗಿ ಪ್ರಮುಖ ಇಲಾಖೆಗಳನ್ನು ಪ್ರಮಾಣಿಕನಾಗಿ ಕೆಲಸ ಮಾಡಿದ ಕಾರಣ ಈ ಸ್ಥಾನ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಕಾನ್ ಬಂಟ್ವಾಳ, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಇರಾ ಗ್ರಾ.ಪಂ.ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಉಪಾಧ್ಯಕ್ಷ ದಿನೇಶ್ ಪೂಜಾರಿ, ಜಬ್ಬಾರ್ ಬೋಳಿಯಾರ್, ಮಜೀದ್ ಫರಂಗಿಪೇಟೆ, ಇಟ್ಬಾಲ್ ಸುಜೀರ್ ಮೊದಲಾದವರಿದ್ದರು.ಬಳಿಕ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು