3:21 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸಿ.ಎಂ.ಇಬ್ರಾಹಿಂ ಕಾಂಗ್ರೆಸ್‌ನಲ್ಲೇ ಮುಂದುವರಿಯುತ್ತಾರೆ ಎಂದ ಯು.ಟಿ.ಖಾದರ್ !

31/01/2022, 18:06

ಮಂಗಳೂರು (ReporterKarnataka.Com) ಸಿ.ಎಂ.ಇಬ್ರಾಹಿಂ ಅವರು ನಮ್ಮ ಹಿರಿಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದು, ಮುಂದೆಯೂ ಕಾಂಗ್ರೆಸ್‌ನಲ್ಲೇ ಇರುತ್ತಾರೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿಯವರ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಸಿ.ಎಂ.ಇಬ್ರಾಹಿಂ ಕೊಡುಗೆ ಅತಿ ಅಗತ್ಯವಾಗಿದೆ. ದೇಶ-ರಾಜ್ಯದ ಜತೆಗೆ ಜನಸಾಮಾನ್ಯರಿಗೆ ವಿರೋಧವಾಗಿರುವ ಬಿಜೆಪಿ ಸರಕಾರವನ್ನು ಕಿತ್ತೊಗೆಯುವುದು ನಮ್ಮ ಪ್ರಮುಖ ಉದ್ದೇಶವಾಗಿದೆ.

ಉಪನಾಯಕನ ಸ್ಥಾನದ ಕುರಿತು ಹಿಂದೆಯೇ ಚರ್ಚೆಯಾಗಿತ್ತು. ಸಿ.ಎಂ.ಇಬ್ರಾಹಿಂ ಅವರ ವಿಚಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ತಾನು ಸಣ್ಣ ವಯಸ್ಸಿನಿಂದಲೂ ಕಾಂಗ್ರೆಸ್‌ನಲ್ಲಿ ಬೇರೆ ಬೇರೆ ಸ್ಥಾನಗಳನ್ನು ಅಲಂಕರಿಸಿ ಶಾಸಕನಾಗಿ, ಸಚಿವನಾಗಿ ಪ್ರಮುಖ ಇಲಾಖೆಗಳನ್ನು ಪ್ರಮಾಣಿಕನಾಗಿ ಕೆಲಸ ಮಾಡಿದ ಕಾರಣ ಈ ಸ್ಥಾನ ಲಭಿಸಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಕಾನ್ ಬಂಟ್ವಾಳ, ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಇರಾ ಗ್ರಾ.ಪಂ.ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಉಪಾಧ್ಯಕ್ಷ ದಿನೇಶ್ ಪೂಜಾರಿ, ಜಬ್ಬಾರ್ ಬೋಳಿಯಾರ್, ಮಜೀದ್ ಫರಂಗಿಪೇಟೆ, ಇಟ್ಬಾಲ್ ಸುಜೀರ್ ಮೊದಲಾದವರಿದ್ದರು.ಬಳಿಕ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು