5:22 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಸಿಎಂ ಕುರ್ಚಿಗೆ ಟವೆಲ್ ಹಾಸಿದ ಸಿ.ಟಿ. ರವಿ!: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪರ ಈಶ್ವರಪ್ಪ ಬಹಿರಂಗ ಬ್ಯಾಟಿಂಗ್!!

25/04/2023, 20:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಕೂಗು ಹೆಚ್ಚಾಗಲಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ
ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಈಶ್ವರಪ್ಪ ಒಲವು ತೋರಿಸಿದ್ದಾರೆ.
ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಈಶ್ವರಪ್ಪ ಅವರು ಬಹಿರಂಗ ಘೋಷಣೆ ಮಾಡಿದ್ದಾರೆ.

ಸಮಾವೇಶದಲ್ಲಿ ಮಾತಾಡುವ ವೇಳೆಯಲ್ಲಿ ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಹೇಳಿದ ಈಶ್ವರಪ್ಪ ಹೇಳಿದ್ದಾರೆ.
ಚಿಕ್ಕಮಗಳೂರಿನಿಂದ ಸಿಟಿ ರವಿ ಗೆಲ್ಲಿಸಿ, ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಕೂಡ ಈಶ್ವರಪ್ಪ ಆಶಿಸಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಸಿ.ಟಿ. ರವಿ ಸಿಎಂ ಆಗುವ ಇಂಗಿತವನ್ನು ಹೊರ ಹಾಕಿದ್ದರು. ಇಂದು ಬಹಿರಂಗ ಸಭೆಯಲ್ಲೇ ಈಶ್ವರಪ್ಪ ಅವರು ರವಿ ಸಿಎಂ ಆಗಲಿ ಎನ್ನುವ ಹೇಳಿಕೆ ನೀಡಿದ್ದಾರೆ‌
ರಾಜ್ಯ ರಾಜಕಾರಣದಲ್ಲಿ ಹಾಗೂ ಬಿಜೆಪಿ ಪಾಳಯದಲ್ಲಿ ಈಶ್ವರಪ್ಪ ಅವರ ಹೇಳಿಕೆಗೆ ಅಷ್ಟು ಮಹತ್ವ ಏನೂ ಇಲ್ಲ. ಭ್ರಷ್ಟಾಚಾರ ಆರೋಪದ ಮೇಲೆ ಅವರು ಮಂತ್ರಿ ಪದವಿ ಕಳೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು