2:31 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಿಎಂ ಕುರ್ಚಿಗೆ ಟವೆಲ್ ಹಾಸಿದ ಸಿ.ಟಿ. ರವಿ!: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪರ ಈಶ್ವರಪ್ಪ ಬಹಿರಂಗ ಬ್ಯಾಟಿಂಗ್!!

25/04/2023, 20:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಕೂಗು ಹೆಚ್ಚಾಗಲಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ
ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಈಶ್ವರಪ್ಪ ಒಲವು ತೋರಿಸಿದ್ದಾರೆ.
ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಈಶ್ವರಪ್ಪ ಅವರು ಬಹಿರಂಗ ಘೋಷಣೆ ಮಾಡಿದ್ದಾರೆ.

ಸಮಾವೇಶದಲ್ಲಿ ಮಾತಾಡುವ ವೇಳೆಯಲ್ಲಿ ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಹೇಳಿದ ಈಶ್ವರಪ್ಪ ಹೇಳಿದ್ದಾರೆ.
ಚಿಕ್ಕಮಗಳೂರಿನಿಂದ ಸಿಟಿ ರವಿ ಗೆಲ್ಲಿಸಿ, ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಕೂಡ ಈಶ್ವರಪ್ಪ ಆಶಿಸಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಸಿ.ಟಿ. ರವಿ ಸಿಎಂ ಆಗುವ ಇಂಗಿತವನ್ನು ಹೊರ ಹಾಕಿದ್ದರು. ಇಂದು ಬಹಿರಂಗ ಸಭೆಯಲ್ಲೇ ಈಶ್ವರಪ್ಪ ಅವರು ರವಿ ಸಿಎಂ ಆಗಲಿ ಎನ್ನುವ ಹೇಳಿಕೆ ನೀಡಿದ್ದಾರೆ‌
ರಾಜ್ಯ ರಾಜಕಾರಣದಲ್ಲಿ ಹಾಗೂ ಬಿಜೆಪಿ ಪಾಳಯದಲ್ಲಿ ಈಶ್ವರಪ್ಪ ಅವರ ಹೇಳಿಕೆಗೆ ಅಷ್ಟು ಮಹತ್ವ ಏನೂ ಇಲ್ಲ. ಭ್ರಷ್ಟಾಚಾರ ಆರೋಪದ ಮೇಲೆ ಅವರು ಮಂತ್ರಿ ಪದವಿ ಕಳೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು