1:15 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸಿಎಂ ಪುತ್ರ ವಿಜಯೇಂದ್ರ ದಿಢೀರ್ ದೆಹಲಿಗೆ ದೌಡು: ಹಾಗಾದರೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತೇ? 

01/06/2021, 14:01

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ಎಸ್. ವಿಜಯೇಂದ್ರ ಅವರು ಮಂಗಳವಾರ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಅವರಿಗೆ ಬುಲಾವ್ ನೀಡಿತ್ತಾ? ಅಥವಾ ವಿಜಯೇಂದ್ರ ಅವರೇ ಹೈಕಮಾಂಡ್ ಭೇಟಿಗೆ ತೆರಳಿದ್ದಾರಾ? ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ.

ಇಂದು ಮುಂಜಾನೆ 5.30ಕ್ಕೆ ವಿಜಯೇಂದ್ರ ಅವರು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಯಾತ್ರೆ ಬಗ್ಗೆ ಯಾವುದೇ ಮಾಹಿತಿ ನೀಡದೆ ಸಿಎಂ ಪುತ್ರ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮೇಲಿಂದ ಮೇಲೆ ಬಿಜೆಪಿ ವರಿಷ್ಠರಿಗೆ ದೂರು ನೀಡುತ್ತಲೇ ಬಂದಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರಂತು ದಿನಾ ಬೆಳಗಾದರೆ ಯಡಿಯೂರಪ್ಪ ವಿರುದ್ಧ ಹಲ್ಲು ಮಸೆಯುತ್ತಲೇ ಇರುತ್ತಾರೆ. ಸಚಿವ ಈಶ್ವರಪ್ಪ ಅವರು ಕೂಡ ಇತ್ತೀಚೆಗೆ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಸಚಿವ ಸಿ.ಪಿ. ಯೋಗೀಶ್ವರ್ ಮೊನ್ನೆ ಮೊನ್ನೆ ದೆಹಲಿಗೆ ಹೋಗಿ ವರಿಷ್ಠರ ಮನೆಯ ಗೇಟು ನೋಡಿ ಬಂದಿದ್ದಾರೆ. ಇವೆಲ್ಲದರ ನಡುವೆ ಇದೀಗ ಸಿಎಂ ಪುತ್ರ ವಿಜಯೇಂದ್ರ ಅವರೇ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಉಂಟುಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು