4:10 AM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಸಿಎಂ ಪುತ್ರ ವಿಜಯೇಂದ್ರ ದಿಢೀರ್ ದೆಹಲಿಗೆ ದೌಡು: ಹಾಗಾದರೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿತ್ತೇ? 

01/06/2021, 14:01

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ಎಸ್. ವಿಜಯೇಂದ್ರ ಅವರು ಮಂಗಳವಾರ ದಿಢೀರನೆ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಅವರಿಗೆ ಬುಲಾವ್ ನೀಡಿತ್ತಾ? ಅಥವಾ ವಿಜಯೇಂದ್ರ ಅವರೇ ಹೈಕಮಾಂಡ್ ಭೇಟಿಗೆ ತೆರಳಿದ್ದಾರಾ? ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ.

ಇಂದು ಮುಂಜಾನೆ 5.30ಕ್ಕೆ ವಿಜಯೇಂದ್ರ ಅವರು ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ಯಾತ್ರೆ ಬಗ್ಗೆ ಯಾವುದೇ ಮಾಹಿತಿ ನೀಡದೆ ಸಿಎಂ ಪುತ್ರ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮೇಲಿಂದ ಮೇಲೆ ಬಿಜೆಪಿ ವರಿಷ್ಠರಿಗೆ ದೂರು ನೀಡುತ್ತಲೇ ಬಂದಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರಂತು ದಿನಾ ಬೆಳಗಾದರೆ ಯಡಿಯೂರಪ್ಪ ವಿರುದ್ಧ ಹಲ್ಲು ಮಸೆಯುತ್ತಲೇ ಇರುತ್ತಾರೆ. ಸಚಿವ ಈಶ್ವರಪ್ಪ ಅವರು ಕೂಡ ಇತ್ತೀಚೆಗೆ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಸಚಿವ ಸಿ.ಪಿ. ಯೋಗೀಶ್ವರ್ ಮೊನ್ನೆ ಮೊನ್ನೆ ದೆಹಲಿಗೆ ಹೋಗಿ ವರಿಷ್ಠರ ಮನೆಯ ಗೇಟು ನೋಡಿ ಬಂದಿದ್ದಾರೆ. ಇವೆಲ್ಲದರ ನಡುವೆ ಇದೀಗ ಸಿಎಂ ಪುತ್ರ ವಿಜಯೇಂದ್ರ ಅವರೇ ದೆಹಲಿಗೆ ತೆರಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಉಂಟುಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು