3:15 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಲ್ಲಿ ಕಚೇರಿ, ಕುರ್ಚಿ ಬಿಟ್ಟರೆ ಮತ್ತೇನಿಲ್ಲ: ರೇಣುಕಾಚಾರ್ಯ ಲೇವಡಿ

15/01/2022, 13:17

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ಕೇವಲ ಹೋದ ಪುಟ್ಟ, ಬಂದ ಪುಟ್ಟ ಎಂಬಂತಿದ್ದು, ಒಂದು ಕಚೇರಿ, ಕುರ್ಚಿ ಬಿಟ್ಟರೆ ಈ ಹುದ್ದೆಯಲ್ಲಿ ಮತ್ತೇನೂ ಇಲ್ಲ’ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅತೃಪ್ತಿಯನ್ನು ಹೊರಹಾಕಿದ್ದಾರೆ.

ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ. ಸುಮ್ಮನೆ ಮನೆ, ಒಂದು ಚೇಂಬರ್ ಕೊಟ್ಟಿದ್ದಾರೆ ಅಷ್ಟೇ. ಅದರಲ್ಲಿ ಬಹಳ ಕೆಲಸವೇನೂ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊಂಡಿಲ್ಲ. ನಾನೂ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕಿಂತಲೂ ಕ್ಷೇತ್ರದ ಶಾಸಕನಾಗಿಯೇ ಇರಲು ಬಯಸುತ್ತೇನೆ’ ಎಂದು ಅಸಮಾಧಾನ ಹೊರಹಾಕಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹೊರತುಪಡಿಸಿದರೆ ಸಚಿವ ಸಂಪುಟದಲ್ಲಿನ ಬಹುತೇಕ ಸಚಿವರು ಬದಲಾಗಬೇಕು. ಅದೇ ಮುಖಗಳನ್ನು ನೋಡಿ ನೋಡಿ ಜನರಿಗೆ ಸಾಕಾಗಿದೆ. ಅಭಿವೃದ್ಧಿ ಕೆಲಸಗಳು ಆಗಬೇಕು. ಆ ದೃಷ್ಟಿಯಿಂದ ಸಚಿವ ಸಂಪುಟ ಪುನರ್ ರಚನೆ ಆಗಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದು, ಸಂಪುಟದಲ್ಲಿ ತಮಗೂ ಒಂದು ಸ್ಥಾನ ನೀಡಬೇಕು ಎಂದು ಪರೋಕ್ಷವಾಗಿ ಬೇಡಿಕೆಯನ್ನಿಟ್ಟರು.

ಸರಕಾರ ಅಸ್ಥಿರಕ್ಕೆ ಯತ್ನ: `ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಹಾಗೂ ಆಡಳಿತಾರೂಢ ಬಿಜೆಪಿಗೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ನಾಟಕೀಯವಾಗಿ ಪಾದಯಾತ್ರೆ ಮಾಡಿದ್ದರು. ಖುದ್ದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪಾದಯಾತ್ರೆ ಇಷ್ಟವಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಲ್ಲಿ ನಾಯಕರಾಗಿ ಹೊರ ಹೊಮ್ಮುತ್ತಾರೋ, ಸಿಎಂ ಅಭ್ಯರ್ಥಿಯನ್ನಾಗಿ ಅವರನ್ನು ಎಲ್ಲಿ ಘೋಷಣೆ ಮಾಡಿಬಿಡುತ್ತಾರೋ ಎಂಬ ಆತಂಕವಿತ್ತು’ ಎಂದು ರೇಣುಕಾಚಾರ್ಯ ದೂರಿದರು.

ಒಂದು ಕಡೆ ಸಿದ್ದರಾಮಯ್ಯರ ಬೆಂಬಲಿಗರು `ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ’ ಎಂದು ಘೋಷಣೆ ಕೂಗಿದರೆ, ಮತ್ತೊಂದು ಕಡೆ ಡಿಕೆಶಿ ಪಟಾಲಂ ಶಿವಕುಮಾರ್ ಅವರೇ ಮುಂದಿನ ಸಿಎಂ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್‍ನವರಿಗೆ ಪಾದಯಾತ್ರೆ ಅಭ್ಯಾಸ ಇರಲಿಲ್ಲ. ಹೇಗಿದ್ದರೂ, ಬಂಧನ ಮಾಡುತ್ತಾರೆಂಬ ನಂಬಿಕೆಯಿಂದ ಪಾದಯಾತ್ರೆ ಆರಂಭಿಸಿದ್ದರು’ ಎಂದು ಅವರು ವಾಗ್ದಾಳಿ ನಡೆಸಿದರು.

`ಈ ಹಿಂದೆ ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪನವರು ಹೋರಾಟ ಮಾಡಿ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ಡಿ.ಕೆ.ಶಿವಕುಮಾರ್ ಹೊಸ ಟ್ರಾಕ್ ಪ್ಯಾಂಟ್, ಶೂ ಎಲ್ಲ ಖರೀದಿಸಿದ್ದರು. ರ್ಯಾಂಪ್ ವಾಕ್ ಮಾಡಿ ರಿಹರ್ಸಲ್ ಮಾಡುತ್ತಿದ್ದರು. ನಮ್ಮ ಹಳ್ಳಿ ಕಡೆ ತಾಲೀಮು ಮಾಡಿಸಿದ ಬಳಿಕ, ನಾಟಕವನ್ನು ಪರದೆ ಮೇಲೆ ತರುತ್ತಿದ್ದರು. ಹಾಗೆ ಡಿ.ಕೆ. ಶಿವಕುಮಾರ್ ಪಾದಯಾತ್ರೆ ರಿಹರ್ಸಲ್ ಮಾಡಿದ್ದರು’ ಎಂದು ರೇಣುಕಾಚಾರ್ಯ ವ್ಯಂಗ್ಯವಾಡಿದರು.

`ಪಾದಯಾತ್ರೆ ವೇಳೆ ಹೋದ ಕಡೆಯಲ್ಲೆಲ್ಲ ಗಂಡಸ್ತನ ಬಗ್ಗೆ ಮಾತನಾಡುತ್ತಿದ್ದರು. ಆದರೆ, ತಾವು ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಗಂಡಸ್ತನ ತೋರಿಸಲಿಲ್ಲ. ಹೀಗಾಗಿರುವಾಗ ಆ ಮಾತು ನಿಮಗೆ ಶೋಭೆ ತರುತ್ತದೆಯೇ? ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದೇನೆ ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನನ್ನ ಹೆಸರನ್ನು ಜಪಿಸಿದರು. ಆದರೆ, ನಾನು ಅಂದೇ ಸಾರ್ವಜನಿಕವಾಗಿ ಕ್ಷಮೆ ಕೋರಿದ್ದೇನೆ. ಇದೀಗ ನನ್ನ ವಿರುದ್ಧ ಮೊಕದ್ದಮೆ ದಾಖಲಿಸಲು ಒತ್ತಾಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಈಗಾಗಲೇ ನಾನು ಕ್ಷಮೆ ಕೋರಿದ್ದೇನೆ. ಅದೇ ರೀತಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ನಾಡಿನ ಜನತೆ ಮುಂದೆ ಬೇಷರತ್ ಕ್ಷಮೆ ಯಾಚಿಸಬೇಕು. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನಿಮ್ಮ ಶಕ್ತಿ ತೋರಿದ್ದರೆ, ಇಂದು ನಾಟಕೀಯ ಪ್ರದರ್ಶನ ಬೇಕಿರಲಿಲ್ಲ. ಕಾಂಗ್ರೆಸ್ ಏನೇ ಯಾತ್ರೆ ಮಾಡಿದರೂ, ಮುಂಬರಲಿರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್‍ಗೆ ಪ್ರತಿಪಕ್ಷ ಸ್ಥಾನವೇ ಗಟ್ಟಿ ಎಂದು ರೇಣುಕಾಚಾರ್ಯ ತಿರುಗೇಟು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು