11:49 PM Sunday7 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿಗಳಿಗೆ ನೋಟೀಸ್ ರಾಜ್ಯಪಾಲರ ಅಧಿಕಾರ ದುರುಪಯೋಗ: ಸಿಪಿಎಂ

04/08/2024, 16:02

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಆರ್ ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ
ರಾಜ್ಯಪಾಲರು ಧಿಡೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡುವ ಆಶ್ಚರ್ಯಕರ ಬೆಳವಣಿಗೆ ದೇಶದ ಗಮನ ಸೆಳೆದಿದೆ ಎಂದು ಬಳ್ಳಾರಿ ಜಿಲ್ಲಾ ಸಿಪಿಎಂ ಸಮಿತಿಯ ಕಾರ್ಯದರ್ಶಿ ಜೆ. ಸತ್ಯಬಾಬು ಕಾರ್ಯದರ್ಶಿ ಪ್ರತಿಪಾದಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,ರಾಜ್ಯಪಾಲರೊಬ್ಬರು ಸಾಮಾನ್ಯ ಪ್ರಜೆಯೊಬ್ಬರ ಮನವಿ ಮೇರೆಗೆ ಮುಖ್ಯಮಂತ್ರಿಗಳಿಗೆ ಶೋಕಾಸ್ ನೀಡಿರುವ ಬೆಳವಣಿಗೆ ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳಲ್ಲಿ ಆತಂಕ ಮೂಡಿಸಿದೆ.
ರಾಜ್ಯಪಾಲರು ಮುಡಾ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಸಭೆಯಲ್ಲಿ ಹಾಗೂ ನೇರ ರಾಜ್ಯಪಾಲರಿಗೂ ವಿವರವಾದ ಮಾಹಿತಿ ನೀಡಿದಾಗಲೂ ಮತ್ತು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ಕ್ರಮವಹಿಸಿದಾಗಲೂ, ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಇಷ್ಠೊಂದು ಅವಸರದಲ್ಲಿ ಬಳಸಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರಕಾರದ ಮುಖ್ಯಮಂತ್ರಿಗೆ, ಆ ಸರಕಾರವನ್ನು ಪ್ರತಿನಿಧಿಸುವ ರಾಜ್ಯಪಾಲರು ಶೋಕಾಸ್ ನೋಟೀಸ್ ನೀಡಿರುವುದು ರಾಜ್ಯಪಾಲರ ಘನತೆಗೆ ತಕ್ಕುದಾಗಿ ಕಂಡು ಬರುತ್ತಿಲ್ಲ.ಬದಲಿಗೆ, ಸ್ಪಷ್ಟವಾಗಿ ಇದೊಂದು ಅಧಿಕಾರ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯಪಾಲರ ಕಚೇರಿಗಳನ್ನು ದುರುಪಯೋಗ ಮಾಡುವ ಬಿಜೆಪಿ ಹಾಗೂ ಒಕ್ಕೂಟ ಸರಕಾರದ ಮುಂದುವರಿದ ದುರ್ನಡೆಯ ಭಾಗವಾಗಿದೆಯೆಂದು ಬಲವಾಗಿ ಖಂಡಿಸಿರು ಅವರು, ಬಿಜೆಪಿ ಮತ್ತು ಅದರ ಒಕ್ಕೂಟ ಸರಕಾರ ವಿರೋಧ ಪಕ್ಷಗಳ ಸರಕಾರಗಳನ್ನು ದುರ್ಬಲಗೊಳಿಸಲು ಇಲ್ಲವೆ ಅಗತ್ಯ ಬಹುಮತವಿಲ್ಲದಿದ್ದರೂ ಬಲವಂತವಾಗಿ ಬಿಜೆಪಿಯ ಸರಕಾರ ಸ್ಥಾಪನೆಗೆ ಕ್ರಮವಹಿಸಲು ರಾಜ್ಯಪಾಲರ ಕಛೇರಿ ಹಾಗೂ ಅವರ ವಿವೇಚನಾಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಇದೇ ಮೊದಲ ಸಲವೇನಲ್ಲ ಎಂಬುದನ್ನು ರಾಜ್ಯದ ಜನತೆ ಗಮನಿಸಬೇಕೆಂದು ವಿವರಿಸಿದ್ದಾರೆ.
ಬಿಜೆಪಿ ಹಾಗೂ ಒಕ್ಕೂಟ ಸರಕಾರಗಳು ರಾಜ್ಯ ಸರಕಾರದ ಮೇಲೆ ನಡೆಸುತ್ತಿರುವ ಪ್ರಜಾಪ್ರಭುತ್ವ ಹಾಗೂ ಜನವಿರೋದಿ ಈ ದುರ್ಧಾಳಿಗಳನ್ನು ಈ ಕೂಡಲೆ ನಿಲ್ಲಿಸುವಂತೆ ಆಗ್ರಹಿಸಿ ಅವರು, ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳು ಬಿಜೆಪಿಯ ಇಂತಹ ಪ್ರಜಾಪ್ರಭುತ್ವ ವಿರೋಧಿ ದುರ್ನಡೆಯನ್ನು ಪ್ರತಿರೋದಿಸಲು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು