5:05 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿಗಳಿಗೆ ನೋಟೀಸ್ ರಾಜ್ಯಪಾಲರ ಅಧಿಕಾರ ದುರುಪಯೋಗ: ಸಿಪಿಎಂ

04/08/2024, 16:02

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಆರ್ ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ
ರಾಜ್ಯಪಾಲರು ಧಿಡೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡುವ ಆಶ್ಚರ್ಯಕರ ಬೆಳವಣಿಗೆ ದೇಶದ ಗಮನ ಸೆಳೆದಿದೆ ಎಂದು ಬಳ್ಳಾರಿ ಜಿಲ್ಲಾ ಸಿಪಿಎಂ ಸಮಿತಿಯ ಕಾರ್ಯದರ್ಶಿ ಜೆ. ಸತ್ಯಬಾಬು ಕಾರ್ಯದರ್ಶಿ ಪ್ರತಿಪಾದಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು,ರಾಜ್ಯಪಾಲರೊಬ್ಬರು ಸಾಮಾನ್ಯ ಪ್ರಜೆಯೊಬ್ಬರ ಮನವಿ ಮೇರೆಗೆ ಮುಖ್ಯಮಂತ್ರಿಗಳಿಗೆ ಶೋಕಾಸ್ ನೀಡಿರುವ ಬೆಳವಣಿಗೆ ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳಲ್ಲಿ ಆತಂಕ ಮೂಡಿಸಿದೆ.
ರಾಜ್ಯಪಾಲರು ಮುಡಾ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಸಭೆಯಲ್ಲಿ ಹಾಗೂ ನೇರ ರಾಜ್ಯಪಾಲರಿಗೂ ವಿವರವಾದ ಮಾಹಿತಿ ನೀಡಿದಾಗಲೂ ಮತ್ತು ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ಕ್ರಮವಹಿಸಿದಾಗಲೂ, ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಇಷ್ಠೊಂದು ಅವಸರದಲ್ಲಿ ಬಳಸಿ, ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರಕಾರದ ಮುಖ್ಯಮಂತ್ರಿಗೆ, ಆ ಸರಕಾರವನ್ನು ಪ್ರತಿನಿಧಿಸುವ ರಾಜ್ಯಪಾಲರು ಶೋಕಾಸ್ ನೋಟೀಸ್ ನೀಡಿರುವುದು ರಾಜ್ಯಪಾಲರ ಘನತೆಗೆ ತಕ್ಕುದಾಗಿ ಕಂಡು ಬರುತ್ತಿಲ್ಲ.ಬದಲಿಗೆ, ಸ್ಪಷ್ಟವಾಗಿ ಇದೊಂದು ಅಧಿಕಾರ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯಪಾಲರ ಕಚೇರಿಗಳನ್ನು ದುರುಪಯೋಗ ಮಾಡುವ ಬಿಜೆಪಿ ಹಾಗೂ ಒಕ್ಕೂಟ ಸರಕಾರದ ಮುಂದುವರಿದ ದುರ್ನಡೆಯ ಭಾಗವಾಗಿದೆಯೆಂದು ಬಲವಾಗಿ ಖಂಡಿಸಿರು ಅವರು, ಬಿಜೆಪಿ ಮತ್ತು ಅದರ ಒಕ್ಕೂಟ ಸರಕಾರ ವಿರೋಧ ಪಕ್ಷಗಳ ಸರಕಾರಗಳನ್ನು ದುರ್ಬಲಗೊಳಿಸಲು ಇಲ್ಲವೆ ಅಗತ್ಯ ಬಹುಮತವಿಲ್ಲದಿದ್ದರೂ ಬಲವಂತವಾಗಿ ಬಿಜೆಪಿಯ ಸರಕಾರ ಸ್ಥಾಪನೆಗೆ ಕ್ರಮವಹಿಸಲು ರಾಜ್ಯಪಾಲರ ಕಛೇರಿ ಹಾಗೂ ಅವರ ವಿವೇಚನಾಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಇದೇ ಮೊದಲ ಸಲವೇನಲ್ಲ ಎಂಬುದನ್ನು ರಾಜ್ಯದ ಜನತೆ ಗಮನಿಸಬೇಕೆಂದು ವಿವರಿಸಿದ್ದಾರೆ.
ಬಿಜೆಪಿ ಹಾಗೂ ಒಕ್ಕೂಟ ಸರಕಾರಗಳು ರಾಜ್ಯ ಸರಕಾರದ ಮೇಲೆ ನಡೆಸುತ್ತಿರುವ ಪ್ರಜಾಪ್ರಭುತ್ವ ಹಾಗೂ ಜನವಿರೋದಿ ಈ ದುರ್ಧಾಳಿಗಳನ್ನು ಈ ಕೂಡಲೆ ನಿಲ್ಲಿಸುವಂತೆ ಆಗ್ರಹಿಸಿ ಅವರು, ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳು ಬಿಜೆಪಿಯ ಇಂತಹ ಪ್ರಜಾಪ್ರಭುತ್ವ ವಿರೋಧಿ ದುರ್ನಡೆಯನ್ನು ಪ್ರತಿರೋದಿಸಲು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು