3:40 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಬಜೆಟ್ ಲೆಕ್ಕಾಚಾರ ಕುರಿತು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ ಮಾಡಲಿದ್ದಾರೆ: ಸ್ಪೀಕರ್ ಯು.ಟಿ.ಖಾದರ್

07/03/2026, 21:22

ಮಂಗಳೂರು(reporterkarnataka.com): ಬಜೆಟ್ ಲೆಕ್ಕಾಚಾರದ ಕುರಿತು ವಿಧಾನ ಮಂಡಲ ಸದಸ್ಯರಿಗೆ ಇದೇ 9 ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 17 ಸಲ ಬಜೆಟ್ ಮಂಡಿಸಿ ಅನುಭವ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅನೇಕ ಶಾಸಕರಿಗೆ ಬಜೆಟ್‌ಗೆ ಸಂಪನ್ಮೂಲ ಕ್ರೋಢೀಕರಿಸುವುದು ಹೇಗೆ, ಹಣಕಾಸಿನ ವರ್ಗೀಕರಣ ಹೇಗೆ, ವಿತ್ತೀಯ ಹೊಣೆಗಾರಿಕೆ, ವಿತ್ತೀಯ ಕೊರತೆ ಎಂದರೇನು ಎಂಬ ಕುರಿತ ಸಂಪೂರ್ಣ ತಿಳಿವಳಿಕೆ ಇರುವುದಿಲ್ಲ. ನಾನು ಶಾಸಕನಾದಾಗ ಈ ಬಗ್ಗೆ ಗೊತ್ತಿರಲಿಲ್ಲ. ಈ ಕಾರ್ಯಾಗಾರದಿಂದ ಅವರು ಬಜೆಟ್ ಕುರಿತ ಚರ್ಚೆಯಲ್ಲಿ ಸಮರ್ಥವಾಗಿ ಭಾಗವಹಿಸಲು ಸಾಧ್ಯವಾಗಲಿದೆ ಎಂದರು.
‘ಇವತ್ತಿನ ಶಾಸಕರು ಭವಿಷ್ಯದಲ್ಲಿ ಹಣಕಾಸು ಸಚಿವರಾಗಬಹುದು. ಮುಖ್ಯಮಂತ್ರಿಯೂ ಆಗಬಹುದು. ಅವರು ಉತ್ತಮ ಸಂಸದೀಯ ಪಟುಗಳಾಗಿ ರೂಪುಗೊಳ್ಳಬೇಕು ಎಂಬ ಕಾರಣಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ನಾನು ಚರ್ಚಿಸಿಯೇ ವಿಧಾನ ಮಂಡಲ ಸದಸ್ಯರಿಗಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇವೆ. ಸೋಮವಾರ ಬಜೆಟ್ ಕಲಾಪದ ಬಳಿಕ ಸಂಜೆ 4 ರಿಂದ ವೇಳೆ ಕಾರ್ಯಾಗಾರ ನಡೆಯಲಿದೆ. ಬಜೆಟ್ ರೂಪಿಸುವ ಕುರಿತು ಉತ್ತಮ ಅನುಭವ ಹೊಂದಿರುವ ಕೆಲವು ಅಧಿಕಾರಿಗಳು, ನಿವೃತ್ತ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಣಕಾಸು ತಜ್ಞರು ಕೂಡ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಎಲ್ಲ ಶಾಸಕರಿಗೆ ತಿಳಿಸಿದ್ದೇವೆ ಎಂದರು.
ರಾಜ್ಯದ 2026-27ನೇ‌ ಸಾಲಿನ ಬಜೆಟ್ ಕುರಿತು ಅಭಿಪ್ರಾಯ ಹಂಚಿಕೊಳ್ಳಲು ಖಾದರ್ ನಿರಾಕರಿಸಿದರು. ಸಾಲದ ಪ್ರಮಾಣ ಹೆಚ್ಚಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಟೀಕೆಗಳು ಎಲ್ಲದಕ್ಕೂ ಬರುತ್ತವೆ. ಕೇಂದ್ರ ಬಜಟ್ ಕುರಿತೂ ಟೀಕೆಗಳು ಬಂದಿವೆ. ವಿಧಾನ ಸಭಾಧ್ಯಕ್ಷನಾಗಿ ಈ ಬಗ್ಗೆ ನಾನು ಹೇಳಿಕೆ ನೀಡುವುದು ಸರಿಯಾಗದು. ರಾಜ್ಯ ಸರ್ಕಾರದ ಬಜೆಟ್ ಕುರಿತು ವಿಧಾನಸಭೆಯಲ್ಲಿ ಅರ್ಥಪೂರ್ಣ ಚರ್ಚೆ ನಡೆಸುವಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು