3:27 PM Sunday30 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ

20/03/2026, 23:05

ಬೆಂಗಳೂರು(reporterkarnataka.com): ದೇಶದಲ್ಲಿ ಸಿಲಿಂಡರ್ ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್​​​ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.

*ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಸಿಎಂ ಪತ್ರ*
ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನ ಬರೆದಿದ್ದರು. ಈಗ ಸಿಲಿಂಡರ್ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೊಂದು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಬರೆದ ಪತ್ರದಲ್ಲಿ ರಾಜ್ಯದ ಸಿಲಿಂಡರ್​ಗಳ ಅಭಾವದ ಬಗ್ಗೆ ಉಲ್ಲೇಖಿಸಿದ್ದಾರೆ. 50 ಸಾವಿರ ಸಿಲಿಂಡರ್​ಗಳು ಬೇಕು. ಭಾರತಕ್ಕೆ ಬಂದಿರುವ ತೈಲ ಹಡಗುಗಳ ತೈಲವನ್ನ ಸಮರ್ಪಕವಾಗಿ ಹಂಚಿಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು