10:28 PM Thursday10 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

CM | ಸೋನಿಯಾ, ರಾಹುಲ್ ವಿರುದ್ದ ದೋಷಾರೋಪ ಪಟ್ಟಿ ಮೋದಿ- ಶಾ ಸೇಡಿನ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

16/04/2025, 16:43

ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.

ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು