3:35 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!!

11/08/2021, 22:41

ಮಂಗಳೂರು(Reporterkarnataka.com)
ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.

ಇದರ ಜತೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ದಾರಿಯ ಕೆಂಜಾರ್ ಜಂಕ್ಷನ್‌ನಲ್ಲಿ ಹುಲ್ಲು ಕಳೆಗಳನ್ನು ಕೂಡ ಕೀಳುವ ಕೆಲಸ ನಡೆಯಿತು.

ಆದರೆ ಮರವೂರು ಸೇತುವೆಯಾಚೆಗಿನ ಹಾಳಾದ ರಸ್ತೆಗೆ ಪಕ್ಕ ವ್ಯವಸ್ಥೆ ಮಾಡದೆ ಬರಿ ಜಲ್ಲಿ ಕಲ್ಲು ಹಾಗೂ ಜಲ್ಲಿ ಕಲ್ಲಿನ ಹುಡಿಯನ್ನು ಹಾಕಿ ತೇಪೆ ಹಚ್ಚುವ ಕೆಲಸ ನಡೆದಿದೆ. ಅದೂ ಕೂಡ ಇಂದು ಸಂಜೆ ಸ್ಥಳೀಯ ಆಡಳಿತ ವ್ಯವಸ್ಥೆಯ ಕಣ್ತೆರೆದಿದ್ದು, ಸಿಎಂ ಆಗಮನದ ಸಂದರ್ಭ ಕಣ್ಕಟ್ಟಿನ ಕೆಲಸವನ್ನೆ ಸ್ಥಳೀಯ ಆಡಳಿತ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಲ್ಲಿಯ ರಸ್ತೆ ಪ್ರತಿ ವರ್ಷವೂ ಹದಗೆಟ್ಟು ಕಿತ್ತು ಹೋದರೂ ಸ್ಥಳೀಯ ಜಿಲ್ಲಾಡಳಿತದ ಗಮನಕ್ಕೆ ಇದು ಬರುವುದೇ ಇಲ್ಲ. ಯಾರಾದರೂ ರಾಜಕೀಯ ಧುರೀಣರು ಬರುವ ಸಂದರ್ಭದಲ್ಲಿ ಮಾತ್ರ ಇಲ್ಲಿಯ ಜನ ಪ್ರತಿನಿಧಿಗಳಿಗೆ ಹಾಳಾದ ರಸ್ತೆ ಕಣ್ಣಿಗೆ ಕಾಣುತ್ತದೆ ಆದರೆ ಶಾಶ್ವತವಾಗಿ ಸಮಸ್ಯೆ ನಿರ್ಮೂಲನೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಸತತವಾಗಿ ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು