6:50 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!!

11/08/2021, 22:41

ಮಂಗಳೂರು(Reporterkarnataka.com)
ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.

ಇದರ ಜತೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ದಾರಿಯ ಕೆಂಜಾರ್ ಜಂಕ್ಷನ್‌ನಲ್ಲಿ ಹುಲ್ಲು ಕಳೆಗಳನ್ನು ಕೂಡ ಕೀಳುವ ಕೆಲಸ ನಡೆಯಿತು.

ಆದರೆ ಮರವೂರು ಸೇತುವೆಯಾಚೆಗಿನ ಹಾಳಾದ ರಸ್ತೆಗೆ ಪಕ್ಕ ವ್ಯವಸ್ಥೆ ಮಾಡದೆ ಬರಿ ಜಲ್ಲಿ ಕಲ್ಲು ಹಾಗೂ ಜಲ್ಲಿ ಕಲ್ಲಿನ ಹುಡಿಯನ್ನು ಹಾಕಿ ತೇಪೆ ಹಚ್ಚುವ ಕೆಲಸ ನಡೆದಿದೆ. ಅದೂ ಕೂಡ ಇಂದು ಸಂಜೆ ಸ್ಥಳೀಯ ಆಡಳಿತ ವ್ಯವಸ್ಥೆಯ ಕಣ್ತೆರೆದಿದ್ದು, ಸಿಎಂ ಆಗಮನದ ಸಂದರ್ಭ ಕಣ್ಕಟ್ಟಿನ ಕೆಲಸವನ್ನೆ ಸ್ಥಳೀಯ ಆಡಳಿತ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಲ್ಲಿಯ ರಸ್ತೆ ಪ್ರತಿ ವರ್ಷವೂ ಹದಗೆಟ್ಟು ಕಿತ್ತು ಹೋದರೂ ಸ್ಥಳೀಯ ಜಿಲ್ಲಾಡಳಿತದ ಗಮನಕ್ಕೆ ಇದು ಬರುವುದೇ ಇಲ್ಲ. ಯಾರಾದರೂ ರಾಜಕೀಯ ಧುರೀಣರು ಬರುವ ಸಂದರ್ಭದಲ್ಲಿ ಮಾತ್ರ ಇಲ್ಲಿಯ ಜನ ಪ್ರತಿನಿಧಿಗಳಿಗೆ ಹಾಳಾದ ರಸ್ತೆ ಕಣ್ಣಿಗೆ ಕಾಣುತ್ತದೆ ಆದರೆ ಶಾಶ್ವತವಾಗಿ ಸಮಸ್ಯೆ ನಿರ್ಮೂಲನೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಸತತವಾಗಿ ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು