12:55 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!!

11/08/2021, 22:41

ಮಂಗಳೂರು(Reporterkarnataka.com)
ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.

ಇದರ ಜತೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ದಾರಿಯ ಕೆಂಜಾರ್ ಜಂಕ್ಷನ್‌ನಲ್ಲಿ ಹುಲ್ಲು ಕಳೆಗಳನ್ನು ಕೂಡ ಕೀಳುವ ಕೆಲಸ ನಡೆಯಿತು.

ಆದರೆ ಮರವೂರು ಸೇತುವೆಯಾಚೆಗಿನ ಹಾಳಾದ ರಸ್ತೆಗೆ ಪಕ್ಕ ವ್ಯವಸ್ಥೆ ಮಾಡದೆ ಬರಿ ಜಲ್ಲಿ ಕಲ್ಲು ಹಾಗೂ ಜಲ್ಲಿ ಕಲ್ಲಿನ ಹುಡಿಯನ್ನು ಹಾಕಿ ತೇಪೆ ಹಚ್ಚುವ ಕೆಲಸ ನಡೆದಿದೆ. ಅದೂ ಕೂಡ ಇಂದು ಸಂಜೆ ಸ್ಥಳೀಯ ಆಡಳಿತ ವ್ಯವಸ್ಥೆಯ ಕಣ್ತೆರೆದಿದ್ದು, ಸಿಎಂ ಆಗಮನದ ಸಂದರ್ಭ ಕಣ್ಕಟ್ಟಿನ ಕೆಲಸವನ್ನೆ ಸ್ಥಳೀಯ ಆಡಳಿತ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಲ್ಲಿಯ ರಸ್ತೆ ಪ್ರತಿ ವರ್ಷವೂ ಹದಗೆಟ್ಟು ಕಿತ್ತು ಹೋದರೂ ಸ್ಥಳೀಯ ಜಿಲ್ಲಾಡಳಿತದ ಗಮನಕ್ಕೆ ಇದು ಬರುವುದೇ ಇಲ್ಲ. ಯಾರಾದರೂ ರಾಜಕೀಯ ಧುರೀಣರು ಬರುವ ಸಂದರ್ಭದಲ್ಲಿ ಮಾತ್ರ ಇಲ್ಲಿಯ ಜನ ಪ್ರತಿನಿಧಿಗಳಿಗೆ ಹಾಳಾದ ರಸ್ತೆ ಕಣ್ಣಿಗೆ ಕಾಣುತ್ತದೆ ಆದರೆ ಶಾಶ್ವತವಾಗಿ ಸಮಸ್ಯೆ ನಿರ್ಮೂಲನೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಸತತವಾಗಿ ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು