10:04 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!!

11/08/2021, 22:41

ಮಂಗಳೂರು(Reporterkarnataka.com)
ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.

ಇದರ ಜತೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ದಾರಿಯ ಕೆಂಜಾರ್ ಜಂಕ್ಷನ್‌ನಲ್ಲಿ ಹುಲ್ಲು ಕಳೆಗಳನ್ನು ಕೂಡ ಕೀಳುವ ಕೆಲಸ ನಡೆಯಿತು.

ಆದರೆ ಮರವೂರು ಸೇತುವೆಯಾಚೆಗಿನ ಹಾಳಾದ ರಸ್ತೆಗೆ ಪಕ್ಕ ವ್ಯವಸ್ಥೆ ಮಾಡದೆ ಬರಿ ಜಲ್ಲಿ ಕಲ್ಲು ಹಾಗೂ ಜಲ್ಲಿ ಕಲ್ಲಿನ ಹುಡಿಯನ್ನು ಹಾಕಿ ತೇಪೆ ಹಚ್ಚುವ ಕೆಲಸ ನಡೆದಿದೆ. ಅದೂ ಕೂಡ ಇಂದು ಸಂಜೆ ಸ್ಥಳೀಯ ಆಡಳಿತ ವ್ಯವಸ್ಥೆಯ ಕಣ್ತೆರೆದಿದ್ದು, ಸಿಎಂ ಆಗಮನದ ಸಂದರ್ಭ ಕಣ್ಕಟ್ಟಿನ ಕೆಲಸವನ್ನೆ ಸ್ಥಳೀಯ ಆಡಳಿತ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಲ್ಲಿಯ ರಸ್ತೆ ಪ್ರತಿ ವರ್ಷವೂ ಹದಗೆಟ್ಟು ಕಿತ್ತು ಹೋದರೂ ಸ್ಥಳೀಯ ಜಿಲ್ಲಾಡಳಿತದ ಗಮನಕ್ಕೆ ಇದು ಬರುವುದೇ ಇಲ್ಲ. ಯಾರಾದರೂ ರಾಜಕೀಯ ಧುರೀಣರು ಬರುವ ಸಂದರ್ಭದಲ್ಲಿ ಮಾತ್ರ ಇಲ್ಲಿಯ ಜನ ಪ್ರತಿನಿಧಿಗಳಿಗೆ ಹಾಳಾದ ರಸ್ತೆ ಕಣ್ಣಿಗೆ ಕಾಣುತ್ತದೆ ಆದರೆ ಶಾಶ್ವತವಾಗಿ ಸಮಸ್ಯೆ ನಿರ್ಮೂಲನೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಸತತವಾಗಿ ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು