8:16 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ: ಪ್ರಚಾರದ ವೇಳೆ ಯತೀಂದ್ರ ಸಿದ್ದರಾಮಯ್ಯರ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು

08/04/2024, 12:06

*ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ನೂರಾರು ಪ್ರತಿಭಟನಾಕಾರರು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಚಾಮರಾಜನಗರ ಲೋಕಸಭಾ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸಂದರ್ಭ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.


ಪ್ರತಿಭಟನಾಕಾರರನ್ನು ಭೇಟಿ ಮಾಡಿ ಓಲೈಸಲು ಮುಂದಾದ ಯತೀಂದ್ರ ಅವರಿಗೆ ಹಿಗ್ಗಾ ಮಗ್ಗಾ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು,ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಛೇಡಿಸಿದರು.
ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ. ಇದನ್ನು ನಮ್ಮ ತಂದೆ ಯವರ ಗಮನಕ್ಕೆ ತರುವುದಾಗಿ ಎಂದು ಹೇಳುತ್ತಿದ್ದಂತೆ ಕುಪಿತಗೊಂಡ ಪ್ರತಿಭಟನಾಕಾರರು ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನು ಖಂಡಿಸಿ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನಕಾರರ ವಾಗ್ದಾಳಿಗೆ ತತ್ತರಿಸಿದ ಯತೀಂದ್ರ ಸಿದ್ದರಾಮಯ್ಯ ಬಂದ ದಾರಿಗೆ ಸುಂಕವಿಲ್ಲದಂತೆ ಅಲ್ಲಿಂದ ತರಾತುರಿಯಲ್ಲಿ ಕಾಲ್ಕಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು