11:25 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಸಿಎಂ ತವರು ವರುಣ ಕ್ಷೇತ್ರದಲ್ಲಿ ಶಾಸಕರು, ಸಂಸದರ ಸಮಾಗಮ: ರೈತರ ಸಮಸ್ಯೆ ಆಲಿಸಿದ ಜನಪ್ರತಿನಿಧಿಗಳು

24/01/2025, 23:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ತಾಂಡವಪುರ ಗ್ರಾಮದಲ್ಲಿ ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ.
ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಆಯೋಜಿಸಿದ್ದ ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಸುನೀಲ್ ಬೋಸ್, ಶಾಸಕರಾದ ದರ್ಶನ್ ಧ್ರುವನಾರಾಯಣ್, ಗಣೇಶ್ ಪ್ರಸಾದ್ ಸೇರಿದಂತೆ ಅಧಿಕಾರಿಗಳು ಮುಖಾಮುಖಿಯಾಗಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಪಣ ತೊಟ್ಟಿದ್ದಾರೆ.
ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಏಕೀಕರಣ ಸಮಿತಿಯ ರಾಜ್ಯ ಮುಖಂಡ ಪಚ್ಚೆ ನಂಜುಂಡಸ್ವಾಮಿ ನೇತೃತ್ವದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ರೈತರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ತಮ್ಮ ಸಮಸ್ಯೆ ಹಾಗೂ ಹಾಕ್ಕೊತ್ತಾಯಗಳನ್ನು ಶಾಸಕರು ಮತ್ತು ಸಂಸದರ ಮುಂದಿಟ್ಟರು. ಕ್ಷೇತ್ರದ ಜನರ ಸಮಸ್ಯೆಗಳಿಗೆ ಆದಷ್ಟು ಬೇಗ ಸೂಕ್ತ ಪರಿಹಾರ ಒದಗಿಸಿಕೊಡಲಾಗುವುದು ಎಂದು ಜನಪ್ರತಿನಿಧಿಗಳು ರೈತರಿಗೆ ಭರವಸೆ ನೀಡಿದ್ದಾರೆ.


ಕಾರ್ಯಕ್ರಮದಲ್ಲಿ ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಏಕೀಕರಣ ಸಮಿತಿಯ ರಾಜ್ಯ ಮುಖಂಡ ಪಚ್ಚೆ ನಂಜುಂಡಸ್ವಾಮಿ, ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ರಂಗಸ್ವಾಮಿ, ಉಪ್ಪನಹಳ್ಳಿ ದೇವರಾಜ್, ಶ್ವೇತಾ, ಮಹದೇವನಾಯಕ, ಶಂಕರನಾಯಕ, ಮೋಹನ್, ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು