1:14 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಸಿಎಂ ತವರು ಕ್ಷೇತ್ರದ ರೈತರಿಗೆ ಸಿಗದ ನ್ಯಾಯ: ಖಾಯಂ ಉದ್ಯೋಗ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ

14/02/2024, 21:18

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿ ವಂಚನೆಗೊಳಗಾದ ಸುಮಾರು 150ಕ್ಕೂ ಹೆಚ್ಚು ರೈತ ಕುಟುಂಬಗಳು ತಮ್ಮ ಹಕ್ಕೊತ್ತಾಯಕ್ಕಾಗಿ ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.
ಕೆಐಎಡಿಬಿ ಗೆ ಭೂಮಿ ನೀಡಿದ ರೈತರ ಹಕ್ಕುಗಳ ಹೋರಾಟ ಸಮಿತಿ ಹಾಗೂ ಜನಾಂದೋಲನಗಳ ಮಹಾ ಮೈತ್ರಿ ರಾಜ್ಯ ರೈತ ಸಂಘ, ಮತ್ತು ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ ಸಹಯೋಗದೊಂದಿಗೆ ನಡೆಯುತ್ತಿರುವ ಪ್ರತಿಭಟನಾ ಧರಣಿ ಕಳೆದ ಆರು ದಿನಗಳಿಂದ ಕಾರ್ಖಾನೆ ಮುಂಭಾಗ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ. ಕಾರ್ಖಾನೆ ಮುಂಭಾಗವೇ ತಮ್ಮ ಜಾನುವಾರುಗಳನ್ನು ಕಟ್ಟಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ, ಅಲ್ಲಿಯೇ ಅಡುಗೆ ಮಾಡಿ ಊಟ, ತಿಂಡಿ ಮಾಡುತ್ತ ಅಹೋರಾತ್ರಿ ಕಷ್ಟದ ಪ್ರತಿಭಟನಾ ಧರಣಿ ಹಾಗೂ ಜೀವನ ರೈತ ಕುಟುಂಬದವರು ನಡೆಸುತ್ತಿದ್ದಾರೆ.
ತಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಾರ್ಖಾನೆ ಮತ್ತು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಕಾರ್ಖಾನೆಯ ಮುಖ್ಯ ದ್ವಾರಗಳಲ್ಲೆ ಕುಳಿತ ಪ್ರತಿಭಟನಾಕಾರರು ಕಾರ್ಖಾನೆಗೆ ಯಾವುದೇ ವಾಹನಗಳು, ಸಿಬ್ಬಂದಿಗಳು ನೌಕರರು ಹೋಗದಂತೆ ದಿಗ್ಬಂಧನ ವಿಧಿಸಿ ಕಾರ್ಖಾನೆಯ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಬಳಿಕ ರೈತ ಸಂಘಟಕರು ಹಾಗೂ ಸಂತ್ರಸ್ತ ರೈತರು ಮತ್ತು ಮಹಿಳೆಯರು ಮಾತನಾಡಿ, ನಮ್ಮ ಮಕ್ಕಳಿಗೆ ಉದ್ಯೋಗ ಸಿಗುತ್ತದೆ ಎಂಬ ಖುಷಿ ಹಾಗೂ ಭರವಸೆಯಿಂದ ನಮ್ಮ ಕೃಷಿ ಭೂಮಿಯನ್ನು ಸಕ್ಕರೆ ಕಾರ್ಖಾನೆಗೆ ಬಹಳ ಕಡಿಮೆ ಬೆಲೆಯಲ್ಲಿ ಭೂಮಿ ನೀಡಿ ಸುಮಾರು ವರ್ಷಗಳೆ ಕಳೆದರೂ ನಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ನೀಡದೆ ವಂಚಿಸುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.
ಇದು ಸಿಎಂ ಪ್ರತಿನಿಧಿಸುತ್ತಿರುವ ಕ್ಷೇತ್ರ ಆದರೂ ಇಲ್ಲಿ ಅವರಿಗೆ ಮತ ನೀಡಿದ ಮತದಾರರು ಮತ್ತು ಭೂಮಿ ಕಳೆದುಕೊಂಡ ರೈತರು ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿಗಳಾಗಲಿ ಕಾರ್ಖಾನೆ ಯವರಾಗಲಿ ಕ್ಯಾರೇ ಎನ್ನದೆ ಒಬ್ಬ ಮುಖ್ಯಮಂತ್ರಿಗೆ ಅವಮಾನವಾಗುವಂತಹ ಘಟನೆಗೆ ಕಾರಣರಾಗಿದ್ದಾರೆ ಎಂದರು.
ಇಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆಯಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಾಗಾಗಿ ಇದಕ್ಕೆ ಸಿಎಂ ಆದಿಯಾಗಿ ಕೂಡಲೇ ಸಂಬಂಧಪಟ್ಟವರು ಇದರ ಬಗ್ಗೆ ಜಾಗೃತರಾಗಿ ನಮ್ಮ ಹಕ್ಕೊತ್ತಾಯಗಳನ್ನು ಬಗೆಹರಿಸದಿದ್ದರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ನಾವು ನೀಡಿರುವ ಜಮೀನನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಬೊಕ್ಕಳ್ಳಿ ನಂಜುಂಡಸ್ವಾಮಿ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾಸಂಚಾಲಕ ಬಸವರಾಜು, ಸಂತ್ರಸ್ತ ರೈತರುಗಳಾದ ಪುನೀತ್, ರಾಜು, ಮಹೇಶ್, ಮಹದೇವಮ್ಮ, ಲಕ್ಷ್ಮಮ್ಮ, ಸುಶೀಲ, ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು