5:29 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಪ್ರಧಾನಿ ಜತೆ ಸಭೆಗೆ ಸಿಎಂ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ: ವಿಜಯೇಂದ್ರ

31/03/2026, 19:54

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಜತೆ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರು ಆಗಿರುವುದು ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲ ಸಿಎಂ ಜತೆ ಆನ್‌ಲೈನ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಯುದ್ಧದ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಈ ಸಭೆಗೆ ಗೈರಾಗಿದ್ದರು.
ಈ ಬಗ್ಗೆ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುದ್ಧದ ಸಂದರ್ಭದಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಡಿಯೋ ಸಂವಾದ ಏರ್ಪಡಿಸಿದ್ದು, ಸಂಕಷ್ಟದ ಸಂದರ್ಭವನ್ನು ಹೇಗೆ ಎದುರಿಸಬೇಕೆಂಬ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಆದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂತಹ ಮಹತ್ವದ ಸಂವಾದದಿಂದ ದೂರ ಉಳಿದು ಕರ್ನಾಟಕದ ಜನತೆಗೆ ದ್ರೋಹ ಬಗೆದಿದ್ದಾರೆ ಎನ್ನದೇ ವಿಧಿಯಿಲ್ಲ! ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಮಂಡಲದಲ್ಲಿ ಭಾಷಣ ಮಾಡುವ ವೇಳೆ ಹಾಗೂ ಮಾಧ್ಯಮಗಳ ಮುಂದೆ ಕೇಂದ್ರ ಸರಕಾರದ ವಿರುದ್ಧ ಪುಂಖಾನುಪುಂಖವಾಗಿ ಟೀಕೆ ಮಾಡುವ ಮುಖ್ಯಮಂತ್ರಿಗಳು ನಿಜವಾಗಿಯೂ ಜನಪರ ಕಾಳಜಿ ಇದ್ದರೆ ಪ್ರಧಾನಿಗಳ ಜತೆ ಸಂವಾದದಲ್ಲಿ ಭಾಗಿ ಆಗಬೇಕಿತ್ತು. ಯುದ್ಧದ ಸಂದರ್ಭದಲ್ಲಿ ಕರ್ನಾಟಕದ ಜನರಿಗೆ ತೊಂದರೆ ಆಗದಂತೆ ಯಾವ ರೀತಿ ಕ್ರಮ ಅನುಸರಿಸಬಹುದು ಎಂಬ ಸಲಹೆಗಳನ್ನೂ ನೀಡಬಹುದಿತ್ತು. ಅಲ್ಲದೇ ಕೇಂದ್ರ ಸರಕಾರ ಕೈಗೊಂಡಿರುವ ಕ್ರಮಗಳಿಗೆ ಪೂಕರವಾಗಿ ರಾಜ್ಯದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬ ವಿಷಯದ ಕುರಿತು ಚರ್ಚೆ ಮಾಡಬಹುದಿತ್ತು ಎಂದು ವಿಜಯೇಂದ್ರ ಹೇಳಿದ್ದಾರೆ.
ಆದರೆ ಉತ್ತರಕುಮಾರನ ಪೌರುಷ ತೋರುವ ಮುಖ್ಯಮಂತ್ರಿಗಳು ಪ್ರಧಾನಿಗಳ ಜತೆ ಮುಖಾಮುಖಿ ಆಗದೇ ಸಂವಾದದಿಂದ ದೂರ ಉಳಿದಿರುವುದು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಯೋಗ್ಯತೆಯನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಸಿದ್ದರಾಮಯ್ಯ ಅವರು ೭ ಕೋಟಿ ಕನ್ನಡಿಗರ ಪ್ರತಿನಿಧಿ ಎಂಬುದನ್ನು ಮರೆತು ಕೇವಲ ಕಾಂಗ್ರೆಸ್ ಕಚೇರಿ, ಸರಕಾರಿ ಬಂಗಲೆಗೆ ಸೀಮಿತ ಆಗಿರುವುದು ಕನ್ನಡಿಗರ ದುರಾದೃಷ್ಟ! ಎಂದು ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು