8:17 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

Co- Operative | ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ನೂತನ ಅಧ್ಯಕ್ಷ ಕೆ.ಎಂ. ನಾಗರಾಜು, ಉಪಾಧ್ಯಕ್ಷ ಎಂ. ನಂಜುಂಡಸ್ವಾಮಿ

03/03/2025, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆಎಂ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಎಂ ನಂಜುಂಡಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಗಳಿಗೆ ಇಂದು ಚುನಾವಣೆ ನಡೆಯಿತು. ಒಟ್ಟು 12 ಮಂದಿ ಸದಸ್ಯರಿರುವ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 9 ಮಂದಿ ನಿರ್ದೇಶಕರು ಹಾಜರಾಗಿದ್ದು ಮೂರು ಮಂದಿ ಗೈರು ಹಾಜರಾಗಿದ್ದರು. ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿ ಪ್ರಸಾದ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ನಾಗರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ ಇದ್ದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ಪ್ರಸಾದ್ ಮಾತನಾಡಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು. ಇದೇ ಸಂದರ್ಭ ಸಹಕಾರ ಸಂಘದ ವತಿಯಿಂದ ನೂತನ ಅಧ್ಯಕ್ಷರು ಹಾಗು ಉಪಾಧ್ಯಕ್ಷರಿಗೆ ಮತ್ತು ನಿರ್ದೇಶಕರುಗಳಿಗೆ ಮಾಲಾಪಣೆ ಮಾಡಿ ಅಭಿನಂದಿಸಲಾಯಿತು.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಾತನಾಡಿ ಎಲ್ಲಾ ನಿರ್ದೇಶಕರ ಮತ್ತು ಮುಖಂಡರ ಸಹಕಾರದೊಂದಿಗೆ ಸರ್ಕಾರದಿಂದ ಸಾಲ ಸೌಲಭ್ಯಗಳನ್ನು ಕೊಡಿಸುವ ಮೂಲಕ ರೈತರ ಹಾಗೂ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿ ನಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಶ್ ಮುಖಂಡರಾದ ಕೆ.ಡಿ ಮಂಜು ಚೋಳ ರಾಜ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಬ್ಯಾಂಕ್ ಪ್ರತಿನಿಧಿ ನಿರಂಜನ್, ನಿರ್ದೇಶಕರುಗಳಾದ ಚೋಳ ರಾಜ್, ಮಸಗೆ ರಾಜು, ಪ್ರಭಾಕರ್,ಲೋಕೇಶ್
ಕುಮಾರ್,ಲೀಲಾಕುಮಾರಿ,ದೇವಮ್ಮ ಸೇರಿದಂತೆ ಸಂಘದ ಕಾರ್ಯದರ್ಶಿ ಸಿದ್ಧನಾಯಕ, ಸಹ ಕಾರ್ಯದರ್ಶಿ ಸಾಕಮ್ಮ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು