3:25 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Co- Operative | ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ನೂತನ ಅಧ್ಯಕ್ಷ ಕೆ.ಎಂ. ನಾಗರಾಜು, ಉಪಾಧ್ಯಕ್ಷ ಎಂ. ನಂಜುಂಡಸ್ವಾಮಿ

03/03/2025, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆಎಂ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಎಂ ನಂಜುಂಡಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಗಳಿಗೆ ಇಂದು ಚುನಾವಣೆ ನಡೆಯಿತು. ಒಟ್ಟು 12 ಮಂದಿ ಸದಸ್ಯರಿರುವ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 9 ಮಂದಿ ನಿರ್ದೇಶಕರು ಹಾಜರಾಗಿದ್ದು ಮೂರು ಮಂದಿ ಗೈರು ಹಾಜರಾಗಿದ್ದರು. ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿ ಪ್ರಸಾದ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ನಾಗರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ ಇದ್ದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ಪ್ರಸಾದ್ ಮಾತನಾಡಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು. ಇದೇ ಸಂದರ್ಭ ಸಹಕಾರ ಸಂಘದ ವತಿಯಿಂದ ನೂತನ ಅಧ್ಯಕ್ಷರು ಹಾಗು ಉಪಾಧ್ಯಕ್ಷರಿಗೆ ಮತ್ತು ನಿರ್ದೇಶಕರುಗಳಿಗೆ ಮಾಲಾಪಣೆ ಮಾಡಿ ಅಭಿನಂದಿಸಲಾಯಿತು.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಾತನಾಡಿ ಎಲ್ಲಾ ನಿರ್ದೇಶಕರ ಮತ್ತು ಮುಖಂಡರ ಸಹಕಾರದೊಂದಿಗೆ ಸರ್ಕಾರದಿಂದ ಸಾಲ ಸೌಲಭ್ಯಗಳನ್ನು ಕೊಡಿಸುವ ಮೂಲಕ ರೈತರ ಹಾಗೂ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿ ನಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಶ್ ಮುಖಂಡರಾದ ಕೆ.ಡಿ ಮಂಜು ಚೋಳ ರಾಜ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಬ್ಯಾಂಕ್ ಪ್ರತಿನಿಧಿ ನಿರಂಜನ್, ನಿರ್ದೇಶಕರುಗಳಾದ ಚೋಳ ರಾಜ್, ಮಸಗೆ ರಾಜು, ಪ್ರಭಾಕರ್,ಲೋಕೇಶ್
ಕುಮಾರ್,ಲೀಲಾಕುಮಾರಿ,ದೇವಮ್ಮ ಸೇರಿದಂತೆ ಸಂಘದ ಕಾರ್ಯದರ್ಶಿ ಸಿದ್ಧನಾಯಕ, ಸಹ ಕಾರ್ಯದರ್ಶಿ ಸಾಕಮ್ಮ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು