6:18 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

Co- Operative | ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ನೂತನ ಅಧ್ಯಕ್ಷ ಕೆ.ಎಂ. ನಾಗರಾಜು, ಉಪಾಧ್ಯಕ್ಷ ಎಂ. ನಂಜುಂಡಸ್ವಾಮಿ

03/03/2025, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆಎಂ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಎಂ ನಂಜುಂಡಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಗಳಿಗೆ ಇಂದು ಚುನಾವಣೆ ನಡೆಯಿತು. ಒಟ್ಟು 12 ಮಂದಿ ಸದಸ್ಯರಿರುವ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 9 ಮಂದಿ ನಿರ್ದೇಶಕರು ಹಾಜರಾಗಿದ್ದು ಮೂರು ಮಂದಿ ಗೈರು ಹಾಜರಾಗಿದ್ದರು. ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿ ಪ್ರಸಾದ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ನಾಗರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ ಇದ್ದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ಪ್ರಸಾದ್ ಮಾತನಾಡಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು. ಇದೇ ಸಂದರ್ಭ ಸಹಕಾರ ಸಂಘದ ವತಿಯಿಂದ ನೂತನ ಅಧ್ಯಕ್ಷರು ಹಾಗು ಉಪಾಧ್ಯಕ್ಷರಿಗೆ ಮತ್ತು ನಿರ್ದೇಶಕರುಗಳಿಗೆ ಮಾಲಾಪಣೆ ಮಾಡಿ ಅಭಿನಂದಿಸಲಾಯಿತು.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಾತನಾಡಿ ಎಲ್ಲಾ ನಿರ್ದೇಶಕರ ಮತ್ತು ಮುಖಂಡರ ಸಹಕಾರದೊಂದಿಗೆ ಸರ್ಕಾರದಿಂದ ಸಾಲ ಸೌಲಭ್ಯಗಳನ್ನು ಕೊಡಿಸುವ ಮೂಲಕ ರೈತರ ಹಾಗೂ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿ ನಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಶ್ ಮುಖಂಡರಾದ ಕೆ.ಡಿ ಮಂಜು ಚೋಳ ರಾಜ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಬ್ಯಾಂಕ್ ಪ್ರತಿನಿಧಿ ನಿರಂಜನ್, ನಿರ್ದೇಶಕರುಗಳಾದ ಚೋಳ ರಾಜ್, ಮಸಗೆ ರಾಜು, ಪ್ರಭಾಕರ್,ಲೋಕೇಶ್
ಕುಮಾರ್,ಲೀಲಾಕುಮಾರಿ,ದೇವಮ್ಮ ಸೇರಿದಂತೆ ಸಂಘದ ಕಾರ್ಯದರ್ಶಿ ಸಿದ್ಧನಾಯಕ, ಸಹ ಕಾರ್ಯದರ್ಶಿ ಸಾಕಮ್ಮ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು