3:41 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Co- Operative | ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ನೂತನ ಅಧ್ಯಕ್ಷ ಕೆ.ಎಂ. ನಾಗರಾಜು, ಉಪಾಧ್ಯಕ್ಷ ಎಂ. ನಂಜುಂಡಸ್ವಾಮಿ

03/03/2025, 22:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕೆಎಂ ನಾಗರಾಜು ಹಾಗೂ ಉಪಾಧ್ಯಕ್ಷರಾಗಿ ಎಂ ನಂಜುಂಡಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ.
ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಗಳಿಗೆ ಇಂದು ಚುನಾವಣೆ ನಡೆಯಿತು. ಒಟ್ಟು 12 ಮಂದಿ ಸದಸ್ಯರಿರುವ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ 9 ಮಂದಿ ನಿರ್ದೇಶಕರು ಹಾಜರಾಗಿದ್ದು ಮೂರು ಮಂದಿ ಗೈರು ಹಾಜರಾಗಿದ್ದರು. ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿ ಪ್ರಸಾದ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆ.ಎಂ. ನಾಗರಾಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಂ. ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದು ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ ಇದ್ದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿ ಪ್ರಸಾದ್ ಮಾತನಾಡಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು. ಇದೇ ಸಂದರ್ಭ ಸಹಕಾರ ಸಂಘದ ವತಿಯಿಂದ ನೂತನ ಅಧ್ಯಕ್ಷರು ಹಾಗು ಉಪಾಧ್ಯಕ್ಷರಿಗೆ ಮತ್ತು ನಿರ್ದೇಶಕರುಗಳಿಗೆ ಮಾಲಾಪಣೆ ಮಾಡಿ ಅಭಿನಂದಿಸಲಾಯಿತು.

ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮಾತನಾಡಿ ಎಲ್ಲಾ ನಿರ್ದೇಶಕರ ಮತ್ತು ಮುಖಂಡರ ಸಹಕಾರದೊಂದಿಗೆ ಸರ್ಕಾರದಿಂದ ಸಾಲ ಸೌಲಭ್ಯಗಳನ್ನು ಕೊಡಿಸುವ ಮೂಲಕ ರೈತರ ಹಾಗೂ ಸಹಕಾರ ಸಂಘದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿ ನಮ್ಮ ಆಯ್ಕೆಗೆ ಸಹಕರಿಸಿದ ಎಲ್ಲಾ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಹೇಶ್ ಮುಖಂಡರಾದ ಕೆ.ಡಿ ಮಂಜು ಚೋಳ ರಾಜ್ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.
ಬ್ಯಾಂಕ್ ಪ್ರತಿನಿಧಿ ನಿರಂಜನ್, ನಿರ್ದೇಶಕರುಗಳಾದ ಚೋಳ ರಾಜ್, ಮಸಗೆ ರಾಜು, ಪ್ರಭಾಕರ್,ಲೋಕೇಶ್
ಕುಮಾರ್,ಲೀಲಾಕುಮಾರಿ,ದೇವಮ್ಮ ಸೇರಿದಂತೆ ಸಂಘದ ಕಾರ್ಯದರ್ಶಿ ಸಿದ್ಧನಾಯಕ, ಸಹ ಕಾರ್ಯದರ್ಶಿ ಸಾಕಮ್ಮ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು