5:52 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ-ಸುಮಂತ್ ದಾಂಪತ್ಯದಲ್ಲಿ ಬಿರುಕು: ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಗೆ ಮೊರೆ

04/06/2026, 13:40

ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.
ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.
ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಇದೆ. ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.

*ಬಿಗ್ ಬಾಸ್ ಮೂಲಕ ಗಮನ ಸೆಳೆದಿದ್ದ ಶುಭಾ:*
ಸಿನಿಮಾಗಳಷ್ಟೇ ಅಲ್ಲದೆ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ಶುಭಾ ಪೂಂಜಾ ತಮ್ಮ ಮುಗ್ಧ ಹಾಗೂ ಚುರುಕಿನ ನಡವಳಿಕೆಯಿಂದ ಅಪಾರ ಪ್ರೇಕ್ಷಕರ ಗಮನ ಸೆಳೆದಿದ್ದರು. ಸದಾ ನಗುನಗುತ್ತಾ ಇರುತ್ತಿದ್ದ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಈ ರೀತಿಯ ಬಿರುಗಾಳಿ ಎದ್ದಿರುವುದು ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು