2:17 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೋಸ್ಟಲ್ ಬರ್ತ್ ಕಾಮಗಾರಿ: ಬೆಂಗ್ರೆಯಲ್ಲಿ ಕೃತಕ ನೆರೆ; ಆತಂಕದಲ್ಲಿ ನಾಗರಿಕರು; ಜಿಲ್ಲಾಡಳಿತ ನೆರವಿಗೆ ಡಿವೈಎಫ್ಐ ಆಗ್ರಹ

19/07/2024, 14:35

ಮಂಗಳೂರು(reporterkarnataka.com): ಸಾಗರಮಾಲ ಯೋಜನೆಯ ಕೋಸ್ಟಲ್ ಬರ್ತ್ ಕಾಮಗಾರಿಯಿಂದ ಬೆಂಗ್ರೆಯಲ್ಲಿ ಕೃತಕ ನೆರೆ ಉಂಟಾಗಿದ್ದು, ನಾಗರಕರು ಮುಳುಗುವ ಆತಂಕಕ್ಕೀಡಾಗಿದ್ದಾರೆ. ಈ ಮಧ್ಯೆ ಜಿಲ್ಲಾಡಳಿತ ನೆರವಿಗೆ ಡಿವೈಎಫ್ಐ ಆಗ್ರಹಿಸಿದೆ.
ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಇನ್ನೊಂದೆಡೆ ಕೋಸ್ಟಲ್ ಬರ್ತ್ ಕಾಮಗಾರಿಯ ಕೆಳಭಾಗದಲ್ಲಿರುವ ತಗ್ಗು ಪ್ರದೇಶದ ಮನೆಗಳಿಗೆ ಅದೇ ರೀತಿ ಸಹರಾ ಶಾಲೆಯ ಆವರಣಗೋಡೆಯ ಒಳಭಾಗಗಳಲ್ಲಿ ಮಳೆ ಹೆಚ್ಚು ಬಂದಾಗೆಲ್ಲಾ ಮಳೆ ನೀರು ನಿಲ್ಲುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಯೋಜನೆಯ ಕಡೆಯಿಂದ ನೀರು ಹೋಗಲು ಸರಿಯಾದ ವ್ಯವಸ್ಥೆಯಿಲ್ಲದೇ ಇನ್ನೂ ಪೂರ್ಣ ಪ್ರಮಾಣದಲ್ಲಿ ವ್ಯವಸ್ಥೆ ಮಾಡಿರುವುದಿಲ್ಲ. ಹಾಗೆಯೇ ಸದ್ಯಕ್ಕೆ ಎತ್ತರದಲ್ಲಿರುವ ಕಾಮಗಾರಿಯ ಪಕ್ಕ ನೀರು ಹೋಗಲು ಮಾಡಿರುವ ವ್ಯವಸ್ಥೆ ತಗ್ಗು ಪ್ರದೇಶದ ನೀರು ಸರಿಯಾಗಿ ಹೋಗದೆ ಅಲ್ಲಲ್ಲಿ ನೀರು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಸರಿಯಾದ ರೀತಿಯಲ್ಲಿ ನೀರು ಹೋಗಲು ವ್ಯವಸ್ಥೆ ಮಾಡದಿರುವುದೇ ಇದಕ್ಕೆಲ್ಲಾ ಕಾರಣವಾಗಿದೆ.
ವಾರಗಳ ಹಿಂದೆ ಈ ಬಗ್ಗೆ ಪೋರ್ಟ್ ಸಹ ಕಾರ್ಯ ನಿರ್ವಾಹಕರಾದ ಪ್ರವೀಣ್ ಅವರ ಗಮನಕ್ಕೆ ನೀಡಿದ್ದು ಸ್ಥಳಕ್ಕೆ ಕರೆಸಿ ಸಮಸ್ಯೆಗಳನ್ನು ತಿಳಿಸಲಾಗಿದೆ. ನೀರು ನಿಲ್ಲುವ ಸಹರಾ ಶಾಲೆಯ ಆವರಣಗೋಡೆಯ ಒಳಭಾಗಕ್ಕೆ ಮರಳು ಹಾಕಿ ಕೊಡುವುದಾಗಿ ತಿಳಿಸಿದ್ದಾರೆ ಮತ್ತೆ ಪೂರ್ಣಪ್ರಮಾಣದಲ್ಲಿ ನೀರು ಹೋಗಲು ಸರಿಯಾದ ವ್ಯವಸ್ಥೆ ಕಲ್ಪಿಸಲು ತಿಳಿಸಲಾಗಿದ್ದು ಮುಂದೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ.
ಗುರುವಾರ ದಿನ ತುಂಬೆ ಅಣೆಕಟ್ಟಿನ ನೀರಿನ ಪ್ರಮಾಣ 6 ಮೀಟರ್ ಇದ್ದು ನಿನ್ನೆ ಬೆಳಿಗ್ಗೆ ಸುಮಾರು 27 ಗೇಟುಗಳು ತೆರೆದಿದ್ದು ನಂತರ ರಾತ್ರಿ ಸಮಯ ಎಲ್ಲಾ 30 ಗೇಟುಗಳು ತೆರೆದಿದೆ. ಅದೇ ರೀತಿ ಪಾವೂರು ಡ್ಯಾಮಿನ ಎಲ್ಲಾ ಗೇಟುಗಳನ್ನು ತೆರೆದಿದ್ದು ನದಿ ಭಾಗದ ಪ್ರದೇಶಗಳಲ್ಲಿ ನೀರು ಹೆಚ್ಚಾಗಿದೆ. ಸ್ವಾಭಾವಿಕವಾಗಿ ನೀರು ಹೆಚ್ಚು ಬಿಟ್ಟ ಸಂದರ್ಭಗಳಲ್ಲಿ ನದಿಭಾಗದ ಪ್ರದೇಶಗಳಲ್ಲಿ ನದಿನೀರಿನ ಪ್ರಮಾಣ ಹೆಚ್ಚಾಗಿ ಮೇಲೆ ಬಂದು ಕೆಲವು ತಗ್ಗು ಪ್ರದೇಶಕ್ಕೆ ಆವರಿಸುತ್ತದೆ.


ನದಿಭಾಗದ ದೋಣಿಗಳು ಒಂದೆಡೆ ವಿಪರೀತ ಮಳೆಯಿಂದಾಗಿ ಹಲವು ದಿನಗಳಿಂದ ಮೇಲ್ಬಾಗದ ಪ್ರದೇಶಗಳಲ್ಲಿ ಹೆಚ್ಚು ಮಳೆಯಿಂದಾಗಿ ಡ್ಯಾಮ್ ನೀರು ಬರುವುದರಿಂದ ನೀರಿನ ರಭಸ ಮತ್ತು ಹೊರ ಹರಿವು ಜೋರಾಗಿರುವುದರಿಂದ ಕೆಲವು ದಿನಗಳಿಂದ ಹೊಸ ಬಲೆಗಳನ್ನು ಎಲ್ಲಾ ಮಾಡಿ ದುಡಿಯಲು ಸಾಧ್ಯವಾಗದೇ ಸರಿಯಾಗಿ ದುಡಿಮೆ ಇಲ್ಲದೆ ನದಿ ದೋಣಿಗಳನ್ನು ಕಟ್ಟಿ ಇಡುವ ಸ್ಥಿತಿ ಉಂಟಾಗಿದೆ.
ಈಗಾಗಲೇ ಮಳೆನೀರು ನಿಲ್ಲುವ ಜಾಗಗಳಿಗೆ ಅಣೆಕಟ್ಟಿನ ನೀರು ಬಿಟ್ಟ ನಂತರ ಇಂದು ನದಿ ಭಾಗದ ಬೆಂಗ್ರೆ ಪ್ರದೇಶ ಮುಳುಗುವ ಭೀತಿಯಲ್ಲಿದೆ ಈ ಹಿನ್ನೆಯಲ್ಲಿ ಕೋಸ್ಟಲ್ ಬರ್ತ್ ಕಾಮಗಾರಿಯನ್ನು ತಡೆ ಹಿಡಿದು ಜಿಲ್ಲಾಡಳಿತ ಕೂಡಲೇ ಎಚ್ಚೆತ್ತು ಜನರ ನೆರವಿಗೆ ಬರಬೇಕಾಗಿ ಡಿವೈಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ತಯ್ಯೂಬ್ ಬೆಂಗ್ರೆ ಮತ್ತು ಬೆಂಗ್ರೆ ಗ್ರಾಮ ಸಮಿತಿ ಅಧ್ಯಕ್ಷ ಹನೀಪ್ ಬೆಂಗ್ರೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು