5:18 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

18/10/2024, 14:14

ಮಂಗಳೂರು(reporterkarnataka.com): ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಅಕ್ಟೋಬರ್17ರಂದು ಆಯೋಜಿಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.
ಮೈಕಲ್ ಡಿಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, ತಮ್ಮ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಹಾಗೂ ಹಿರಿಯರು ನಮಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಬಾರದು. ವಿದ್ಯಾಭ್ಯಾಸ ಮುಗಿದ ನಂತರ, ಹೆತ್ತವರನ್ನು ಚೆನ್ನಾಗಿ ನೋಡುವ ಜವಬ್ದಾರಿ ವಹಿಸಿ ಮತ್ತು ತಮ್ಮಿಂದ ಬಡವರಿಗೆ ಸಹಾಯ ಮಾಡುವ ಆಸಕ್ತಿ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅವರ ಧರ್ಮಪತ್ನಿ ಫ್ಲಾವಿಯ ಡಿ ಸೋಜ, ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ವಿನ್ಸೆಂಟ್ ಡಿ ಸೋಜ ಮತ್ತು ಸಹ ನಿರ್ದೇಶಕ ವಂದನೀಯ ಫಾ| ಲೊರೆನ್ಸ್ ಕುಟಿನ್ಹಾ ಅವರು ಹಾಜರಿದ್ದರು.
ಸಿಒಡಿಪಿ ನಿರ್ದೇಶಕರಾದ ರೆ.ಫಾ. ವಿನ್ಸೆಂಟ್ ಡಿ ಸೋಜ ಶಿಕ್ಷಣ ನಿಧಿಯ ಪ್ರತಿಷ್ಠಾಪಕ ದಾನಿಗಳಾದ ಮೈಕಲ್ ಡಿ ಸೋಜ ಮತ್ತು ಫ್ಲಾವಿಯ ಡಿಸೋಜ ರವರ ಪರಿಚಯ ನೀಡಿದರು. ಬಿಷಪ್‌ರವರು ಅವರಿಗೆ ಗೌರವ ಅರ್ಪಣೆ ಸಲ್ಲಿಸಿದರು.
ಕುಟುಂಬದ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ 103 ವಿದ್ಯಾರ್ಥಿಗಳಿಗೆ ರೂ. 86,60,000/- ಬಡ್ಡಿ ರಹಿತ ಸಾಲವನ್ನು ಬ್ಯಾಂಕಿನ ಮುಖಾಂತ್ರ ವಿತರಿಸಲಾಗುವುದು.
ವಂದನೀಯ ಫಾ| ಲೊರೆನ್ಸ್ ಕುಟಿನ್ಹಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು