7:40 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

18/10/2024, 14:14

ಮಂಗಳೂರು(reporterkarnataka.com): ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಅಕ್ಟೋಬರ್17ರಂದು ಆಯೋಜಿಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.
ಮೈಕಲ್ ಡಿಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, ತಮ್ಮ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಹಾಗೂ ಹಿರಿಯರು ನಮಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಬಾರದು. ವಿದ್ಯಾಭ್ಯಾಸ ಮುಗಿದ ನಂತರ, ಹೆತ್ತವರನ್ನು ಚೆನ್ನಾಗಿ ನೋಡುವ ಜವಬ್ದಾರಿ ವಹಿಸಿ ಮತ್ತು ತಮ್ಮಿಂದ ಬಡವರಿಗೆ ಸಹಾಯ ಮಾಡುವ ಆಸಕ್ತಿ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅವರ ಧರ್ಮಪತ್ನಿ ಫ್ಲಾವಿಯ ಡಿ ಸೋಜ, ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ವಿನ್ಸೆಂಟ್ ಡಿ ಸೋಜ ಮತ್ತು ಸಹ ನಿರ್ದೇಶಕ ವಂದನೀಯ ಫಾ| ಲೊರೆನ್ಸ್ ಕುಟಿನ್ಹಾ ಅವರು ಹಾಜರಿದ್ದರು.
ಸಿಒಡಿಪಿ ನಿರ್ದೇಶಕರಾದ ರೆ.ಫಾ. ವಿನ್ಸೆಂಟ್ ಡಿ ಸೋಜ ಶಿಕ್ಷಣ ನಿಧಿಯ ಪ್ರತಿಷ್ಠಾಪಕ ದಾನಿಗಳಾದ ಮೈಕಲ್ ಡಿ ಸೋಜ ಮತ್ತು ಫ್ಲಾವಿಯ ಡಿಸೋಜ ರವರ ಪರಿಚಯ ನೀಡಿದರು. ಬಿಷಪ್‌ರವರು ಅವರಿಗೆ ಗೌರವ ಅರ್ಪಣೆ ಸಲ್ಲಿಸಿದರು.
ಕುಟುಂಬದ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ 103 ವಿದ್ಯಾರ್ಥಿಗಳಿಗೆ ರೂ. 86,60,000/- ಬಡ್ಡಿ ರಹಿತ ಸಾಲವನ್ನು ಬ್ಯಾಂಕಿನ ಮುಖಾಂತ್ರ ವಿತರಿಸಲಾಗುವುದು.
ವಂದನೀಯ ಫಾ| ಲೊರೆನ್ಸ್ ಕುಟಿನ್ಹಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು