1:53 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಪ್ರಾಮಾಣಿಕ ಕಳ್ಳರು!: 4 ಬಾರ್ ಗಳಿಗೆ ಹೊಕ್ಕ ಚೋರರು: ಹಣ ಸಿಕ್ಕಿಲ್ಲ, ಆದ್ರೆ ಎಣ್ಣೆ ಮುಟ್ಟಿಲ್ಲ!!

29/11/2021, 18:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಲ್ಕು ಬಾರ್ ಗಳ ಬೀಗ ಹೊಡೆದು ಕಳ್ಳತನಕ್ಕೆ ಯತ್ನಿಸಿರೋ ಕಳ್ಳರು ಹಣ ಸಿಗದಿದ್ದಾಗಲೂ ಎಣ್ಣೆ ಮುಟ್ಟದೆ ಹಣ ಸಿಗಲಿಲ್ಲವೆಂದು ಪ್ರಾಮಾಣಿಕ ಬರೀಗೈಲಿ ವಾಪಸ್ ಹೋದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. 

ಬೆಳಗಿನ ಜಾವ 3 ಗಂಟೆ ಸುಮಾರಿಗೆ ತಾಲೂಕಿನ ಮೂಡಿಗೆರೆ ಪಟ್ಟಣದ ಚಂದನ್ ಬಾರ್, ಬಣಕಲ್ ಗ್ರಾಮದ ಸಂಭ್ರಮ್ ಬಾರ್ ಸೇರಿದಂತೆ ಗೋಣಿಬೀಡು ಹಾಗೂ ಚೀಕನಹಳ್ಳಿಯಲ್ಲಿ ಕಳ್ಳರು ನಾಲ್ಕು ಬಾರ್ ಗಳ ಬೀಗ ಹೊಡೆದು ಕಳ್ಳತನಕ್ಕೆ ಯತ್ನಿದ್ದರು. ಆದರೆ, ಕಳ್ಳರಿಗೆ ನಾಲ್ಕು ಬಾರ್ ನಲ್ಲೂ ಹಣ ಸಿಗಲಿಲ್ಲ. ಹಣ ಸಿಗದಿದ್ದಾಗ ಕಳ್ಳರು ಮದ್ಯವನ್ನ ಮುಟ್ಟದೆ ವಾಪಸ್ಸಾಗಿದ್ದಾರೆ. ಇದನ್ನ ಕಂಡ ಸ್ಥಳಿಯರು ಈ ಕಳ್ಳರು ಎಣ್ಣೆ ಹೊಡೆಯುವುದಿಲ್ಲ, ಇವ್ರು ಹಣದ ಕಳ್ಳರು ಅನ್ಸತ್ತೆ ಎಂದು ಕಾಮಿಡಿ ಮಾಡಿದ್ದಾರೆ. ಬಾರ್ ಗಳ ಅಕ್ಕಪಕ್ಕದ ಅಂಗಡಿಗಳಲ್ಲಿನ ಸಿಸಿಟಿವಿ ಫುಟೇಜ್ ನಲ್ಲಿ ಕಳ್ಳರ ಕೈಚಳಕ ಸೆರೆಯಾಗಿದೆ. ಎಲ್ಲರೂ ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದರು ಎಂಬುದು ಖಾತ್ರಿಯಾಗಿದೆ. ಮೂಡಿಗೆರೆ, ಬಣಕಲ್ ಹಾಗೂ ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕೊರೋನಾ ಎರಡನೇ ಹಂತದ ಲಾಕ್ ಟೈಂನಲ್ಲಿ ಚಿಕ್ಕಮಗಳೂರು ನಗರದ ಬಾರ್ ಗೆ ಕಳ್ಳರು ಕನ್ನ ಹಾಕಿದ್ದರು. ಈ ವೇಳೆ ಕಳ್ಳರು ಹಣ ಹಾಗೂ ಕಾಸ್ಟ್ಲಿ ಎಣ್ಣೆ ಮುಟ್ಟಿರಲಿಲ್ಲ. ಲೋಕಲ್ ಬ್ರ್ಯಾಂಡ್ ಬಿಟ್ಟಿರಲಿಲ್ಲ. ಆದರೆ, ಈಗ ಮೂಡಿಗೆರೆಯಲ್ಲಿ ಬಾರ್ ಬೀಗ ಹೊಡೆದಿರೋ ಚೋರರು ಹಣ ಸಿಗದಿದ್ದಾಗ ಎಣ್ಣೆಯನ್ನೂ ಮುಟ್ಟದೆ ವಾಪಸ್ಸಾಗಿರೋದು ಸ್ಥಳೀಯಲ್ಲಿ ಆಶ್ಚರ್ಯ ಮೂಡಿಸಿದೆ. ಪ್ರಕರಣ ದಾಖಲಿಸಿಕೊಂಡಿರೋ ಮೂಡಿಗೆರೆ ಪೊಲೀಸರು ಪ್ರಾಮಾಣಿಕ ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು