10:42 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಮುಂದುವರಿದ ವ್ಯಾಘ್ರ ಆರ್ಭಟ: ಹುಲಿ ದಾಳಿಗೆ ಬಣಕಲ್ ಸಮೀಪ ಹಸು ಸಾವು

06/04/2022, 09:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಳ್ಳಿಯಲ್ಲಿ ಹುಲಿ ದಾಳಿ ಮುಂದುವರೆದಿದ್ದು ಹಸು ಸಾವನ್ನಪ್ಪಿದ ಘಟನೆ ನಡೆದಿದೆ

ಕಳೆದ ಎರಡು ವರ್ಷಗಳಿಂದ ಬಿ.ಹೊಸಳ್ಳಿಯಲ್ಲಿ ನಿರಂತರ ಹುಲಿ ದಾಳಿ ಮಾಡಿ ಅನೇಕ ಹಸುಗಳನ್ನು ಕೊಂದು ಹಾಕಿದೆ. ಸೋಮವಾರ ಗ್ರಾಮದ ಗೋಪಾಲ್ ಅವರ ಹಸು ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ಮಾಡಿ ಸಾಯಿಸಿದೆ. ಸ್ಥಳಕ್ಕೆ ಅರಣ್ಯ ರಕ್ಷಕ ಮೊಹಸಿನ್, ಜಾನುವಾರು ಅಧಿಕಾರಿ ಅಜೀಜ್ ಅಹಮ್ಮದ್  ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ಹುಲಿ ಸ್ಥಳಾಂತರಿಸಲು ಒತ್ತಾಯ: ಬಿ.ಹೊಸಳ್ಳಿ,ಭಾರತೀಬೈಲ್,ಬಾನಳ್ಳಿ ಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ಹುಲಿ ದಾಳಿ ಸತತವಾಗಿ ನಡೆಯುತ್ತಿದೆ.ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೂ ತಂದು ಸಿಸಿ ಕ್ಯಾಮೆರಾ ಅಳವಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಗ್ರಾಮದ ಸುತ್ತಮುತ್ತ ಹುಲಿ ಸಂಚಾರದಿಂದ ಶಾಲಾ ಮಕ್ಕಳು, ಕೂಲಿ ಕಾರ್ಮಿಕರು, ಗ್ರಾಮಸ್ಥರು ಓಡಾಡಲು ಭಯ ಪಡುವಂತಾಗಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವೇ ಹುಲಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು