4:32 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ‌  ಸಾಮರಸ್ಯದ ಹೆಜ್ಜೆ: ವಿವಾದಿತ ಸ್ಥಳದಲ್ಲಿದ್ದ ಸಮಾಧಿ ಶಿಲುಬೆ ತೆರವುಗೊಳಿಸಿದ ಕ್ರೈಸ್ತ ಸಮುದಾಯ

06/04/2022, 12:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪಟ್ಟಣದ ಹೃದಯ ಭಾಗದಲ್ಲಿದ್ದ ವಿವಾದಿತ ಸಮಾಧಿಯ ಶಿಲುಬೆಯನ್ನು ಕ್ರೈಸ್ತ.ಸಮುದಾಯ ತೆರವುಗೊಳಿಸಿದೆ. ಆ ಮೂಲಕ ಪಟ್ಟಣ ಪಂಚಾಯಿತಿಯಿಂದ ನಡೆಯುತ್ತಿದ್ದ ಅಭಿವೃದ್ಧಿ ಕಾರ್ಯಕ್ಕೆ ಸಾಥ್ ನೀಡಿದೆ.

ನೂರಾರು ವರ್ಷಗಳಿಂದ ಪಟ್ಟಣದ ಹೃದಯಭಾಗದ ವಿವಾದಿತ ಸ್ಥಳದಲ್ಲಿದ್ದ ಶಿಲುಬೆಯನ್ನು ಹಲವು ಬಾರಿ ತೆರವುಗೊಳಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿತ್ತು. ಇದೀಗ ಸಾಮರಸ್ಯದ ಮೂಲಕ ಕ್ರೈಸ್ತರ ಸಮಾಧಿಯ ಶಿಲುಬೆಯನ್ನು ತೆರವುಗೊಳಿಸಲಾಗಿದೆ.


ನೂರಾರು ವರ್ಷಗಳ ಹಿಂದೆ ಕ್ರೈಸ್ತ ಸಮುದಾಯ ಸ್ಯಾಮ್ಯುಯಲ್ ಸುಸ್ಮಾನ್ ಎನ್ನುವ ವ್ಯಕ್ತಿ ಮೃತಪಟ್ಟಿದ್ದರು. ಆ ವ್ಯಕ್ತಿ ಅಂತ್ಯಸಂಸ್ಕಾರವನ್ನು ಬಸ್ ನಿಲ್ದಾಣ ಎದುರಿನ ಜಾಗದಲ್ಲಿ ಮಾಡಲಾಗಿತ್ತು.

ಈ ನಿಟ್ಟಿನಲ್ಲಿ ಶಾಂತಿಯುತವಾಗಿ ಮಾತುಕತೆ ನಡೆಸಿ ವಿವಾದವನ್ನು ಪಟ್ಟಣ ಪಂಚಾಯಿತಿ ಬಗೆಹರಿಸಿದೆ. ಸಮಾಧಿ ತೆರವುಗಳಿಸಿದ ಜಾಗದಲ್ಲಿ ಪಟ್ಟಣ ಪಂಚಾಯಿತಿಯ ಮಳಿಗೆಗಳ  ನಿರ್ಮಾಣ ಮಾಡಲಿದೆ.


ತೆರವುಳಿಸಿದ ಸಮಾಧಿಯ ಶಿಲುಬೆಗೆ ಮತ್ತೆ ಕ್ರೈಸ್ತರ ಸ್ಮಶಾನದಲ್ಲಿ ಪೂಜಾ ವಿಧಿ ವಿಧಾನದ ಮೂಲಕ ನಮನ ಸಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು