9:09 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ: ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ನೆಲೆಸಲು ವಿಶೇಷ ಪೂಜೆ

25/08/2023, 20:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು ಸುತ್ತಮುತ್ತ ಮಹಿಳೆಯರು ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಅತ್ತಿಗೆರೆ ಗೃಹಿಣಿ ಸಾವಿತ್ರಿ ಮಾತನಾಡಿ’ ಲಕ್ಷ್ಮಿ ಶುದ್ದತೆಯ ಸಂಕೇತವಾಗಿದೆ. ಗೃಹಿಣಿಯರು ಬೆಳಿಗ್ಗೆ ಬೇಗನೇ ಎದ್ದು ಮನೆ ಸ್ವಚ್ಚತೆಗೊಳಿಸಿ ರಂಗೋಲಿ ತಳಿರು ತೋರಣಗಳಿಂದ ಲಕ್ಷ್ಮಿಯನ್ನು ಅಲಂಕರಿಸಿ ಶುಭ್ರ ಬಟ್ಟೆ ತೊಟ್ಟು ಮಡಿಯಲ್ಲಿ ನೈವೇದ್ಯ ತಯಾರಿಸಲಾಗುತ್ತದೆ. ಬೆಳಿಗ್ಗೆಯಿಂದ ವೃತ ಆಚರಿಸುವ ಆಚರಣೆಯಿದೆ. ಲಕ್ಷ್ಮಿ ಮುಂದೆ ಹಣ,ಚಿನ್ನ, ಬಳೆ, ಹಣ್ಣು,ವಿವಿಧ ಸಿಹಿ,ಅರಿಶಿಣ,ಕುಂಕುಮ ಇಟ್ಟು ವರ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ.ಮನೆಯಲ್ಲಿ ನೆಮ್ಮದಿ, ಶಾಂತಿ, ಸುಖ, ಸಮೃದ್ಧಿ, ಐಶ್ವರ್ಯ ನೆಲೆಸಲು ವರಮಹಾಲಕ್ಷ್ಮಿಯನ್ನು ವಿಶೇಷವಾಗಿ ಪೂಜಿಸಲಾಗುತ್ತದೆ’ ಎಂದರು.


ಕೊಟ್ಟಿಗೆಹಾರದ ಅತ್ತಿಗೆರೆಯ ಸುತ್ತಮುತ್ತಲಿನ ಗೃಹಿಣಿಯರು ಸೇರಿ ವರಮಹಾಲಕ್ಷ್ಮಿ ಪೂಜೆಯನ್ನು ಸಂಭ್ರಮದಿಂದ ಆಚರಿಸಿದರು. ಬಂದ ಗೃಹಿಣಿಯರಿಗೆ ಅರಿಶಿಣ ಕುಂಕುಮ, ಬಳೆ ನೀಡಲಾಯಿತು. ಈ ಸಂದರ್ಭದಲ್ಲಿ ಗೃಹಿಣಿಯರಾದ ಜ್ಯೋತಿ, ಸಾವಿತ್ರಿ, ಪಾರ್ವತಿ ನಾಗೇಶ್,ಲಕ್ಷ್ಮಿ,ವಿನುತ ಪವಿನ್, ದೀಪಾ ನವೀನ್, ಪ್ರತಿಷ್ಠ, ಅಮೃತ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು