2:12 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ: ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ನೆಲೆಸಲು ವಿಶೇಷ ಪೂಜೆ

25/08/2023, 20:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು ಸುತ್ತಮುತ್ತ ಮಹಿಳೆಯರು ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಅತ್ತಿಗೆರೆ ಗೃಹಿಣಿ ಸಾವಿತ್ರಿ ಮಾತನಾಡಿ’ ಲಕ್ಷ್ಮಿ ಶುದ್ದತೆಯ ಸಂಕೇತವಾಗಿದೆ. ಗೃಹಿಣಿಯರು ಬೆಳಿಗ್ಗೆ ಬೇಗನೇ ಎದ್ದು ಮನೆ ಸ್ವಚ್ಚತೆಗೊಳಿಸಿ ರಂಗೋಲಿ ತಳಿರು ತೋರಣಗಳಿಂದ ಲಕ್ಷ್ಮಿಯನ್ನು ಅಲಂಕರಿಸಿ ಶುಭ್ರ ಬಟ್ಟೆ ತೊಟ್ಟು ಮಡಿಯಲ್ಲಿ ನೈವೇದ್ಯ ತಯಾರಿಸಲಾಗುತ್ತದೆ. ಬೆಳಿಗ್ಗೆಯಿಂದ ವೃತ ಆಚರಿಸುವ ಆಚರಣೆಯಿದೆ. ಲಕ್ಷ್ಮಿ ಮುಂದೆ ಹಣ,ಚಿನ್ನ, ಬಳೆ, ಹಣ್ಣು,ವಿವಿಧ ಸಿಹಿ,ಅರಿಶಿಣ,ಕುಂಕುಮ ಇಟ್ಟು ವರ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ.ಮನೆಯಲ್ಲಿ ನೆಮ್ಮದಿ, ಶಾಂತಿ, ಸುಖ, ಸಮೃದ್ಧಿ, ಐಶ್ವರ್ಯ ನೆಲೆಸಲು ವರಮಹಾಲಕ್ಷ್ಮಿಯನ್ನು ವಿಶೇಷವಾಗಿ ಪೂಜಿಸಲಾಗುತ್ತದೆ’ ಎಂದರು.


ಕೊಟ್ಟಿಗೆಹಾರದ ಅತ್ತಿಗೆರೆಯ ಸುತ್ತಮುತ್ತಲಿನ ಗೃಹಿಣಿಯರು ಸೇರಿ ವರಮಹಾಲಕ್ಷ್ಮಿ ಪೂಜೆಯನ್ನು ಸಂಭ್ರಮದಿಂದ ಆಚರಿಸಿದರು. ಬಂದ ಗೃಹಿಣಿಯರಿಗೆ ಅರಿಶಿಣ ಕುಂಕುಮ, ಬಳೆ ನೀಡಲಾಯಿತು. ಈ ಸಂದರ್ಭದಲ್ಲಿ ಗೃಹಿಣಿಯರಾದ ಜ್ಯೋತಿ, ಸಾವಿತ್ರಿ, ಪಾರ್ವತಿ ನಾಗೇಶ್,ಲಕ್ಷ್ಮಿ,ವಿನುತ ಪವಿನ್, ದೀಪಾ ನವೀನ್, ಪ್ರತಿಷ್ಠ, ಅಮೃತ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು